ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜೋಕರ್ಗೆ ಹೋಲಿಸಿದ್ದಾರೆ.
ರಾಹುಲ್ ಗಾಂಧಿ ಅಂದರೆ ಇಂಟರ್ನ್ಯಾಶನಲ್ ಜೋಕರ್ ಇದ್ದಂತೆ. ಅಂಥವರನ್ನು ಪ್ರಧಾನಮಂತ್ರಿ ಮಾಡಲು ಇಂದು ನಮ್ಮ ರಾಜ್ಯವನ್ನು ಬಲಿ ಕೊಡುತ್ತಿದ್ದಾರೆ. ಬರಗಾಲ ಘೋಷಣೆ ಮಾಡಬೇಕಲ್ಲಾ? ನಾನು ಮೊನ್ನೆ ರಾಯಚೂರು ಜಿಲ್ಲೆಗೆ ಹೋಗಿದ್ದೆ. ತಿಂಥಣಿ ಬ್ರಿಜ್ನಲ್ಲಿ ಪಕ್ಷಿಗಳಿಗೂ ಸಹ ಕುಡಿಯಲು ನೀರಿಲ್ಲ. ಅಷ್ಟು ಭಯಾನಕ ಬರಗಾಲವಿದೆ. ರೈತರಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಸಿಗುತ್ತಿಲ್ಲ. ರೈತರ ಪಂಪ್ಸೆಟ್ಗಳು ಬಂದ್ ಆಗಿವೆ. ಮೂರು ತಾಸು, ಎರಡೂವರೆ ತಾಸು ವಿದ್ಯುತ್, ಅದೂ ರಾತ್ರಿ ಕೊಡುತ್ತಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಕೇವಲ ಮೂರು ನಾಲ್ಕು ತಿಂಗಳುಗಳಲ್ಲಿಯೇ ವಿಫಲವಾಗಿದೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…