ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ, ನವಯುಗದ ರಾವಣ ಎಂದು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.
ಈ ವಿವಾದಾತ್ಮಕ ಪೋಸ್ಟರ್ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ (ಟ್ವಿಟ್ಟರ್) ಹಂಚಿಕೊಂಡಿದೆ. ಈ ಟ್ವೀಟ್ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಪೋಸ್ಟರ್ನಲ್ಲಿ ಬಿಜೆಪಿ, ರಾವಣ, ಕಾಂಗ್ರೆಸ್ ಪಕ್ಷದ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶನ ಎಂದು ಬರೆದಿದೆ. ಅಲ್ಲದೇಕ ಚಿತ್ರದಲ್ಲಿ ರಾವಣನಂತೆಯೇ ರಾಹುಲ್ ಗಾಂಧಿಯವರಿಗೆ ಬಹು ತಲೆಗಳನ್ನು ಬಿಡಿಸಲಾಗಿದ್ದು, ರಾವಣನಂತೆ ರಕ್ಷಾಕವಚವನ್ನು ಧರಿಸಿರುವುದನ್ನು ತೋರಿಸಲಾಗಿದೆ.
ಇದರ ಜೊತೆ ಹೊಸ ಯುಗದ ರಾವಣ ಬರೆಯಲಾಗಿದೆ. ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ ಮತ್ತು ಅವನ ಗುರಿ ಭಾರತವನ್ನು ನಾಶಮಾಡುವುದು ಎಂದು ಬಿಜೆಪಿ ಬರೆದುಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಬಿಜೆಪಿ ಈ ರೀತಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…