BREAKING NEWS

ಸದನದಲ್ಲಿ ರಾಹುಲ್ ಗಾಂಧಿ ಅನುಚಿತ ವರ್ತನೆ ಆರೋಪ : ಸ್ಪೀಕರ್ ಗೆ ಬಿಜೆಪಿ ಮಹಿಳಾ ಸಂಸದೆಯರ ದೂರು

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು 21 ಮಹಿಳಾ ಬಿಜೆಪಿ ಸದಸ್ಯರ ಸಹಿ ಇರುವ ಪತ್ರವನ್ನು ಸ್ಪೀಕರ್ ಚೇಂಬರ್ ನಲ್ಲಿ ಸಲ್ಲಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸದನದಲ್ಲಿ ಮಹಿಳಾ ಸದಸ್ಯರ ಘನತೆಗೆ ಧಕ್ಕೆ ತಂದಿರುವುದಲ್ಲದೇ, ಈ ಸದನದ ಘನತೆಗೆ ಕುಂದು ತಂದಿರುವ ಇಂತಹ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಸದರಾಗಿ ಮರುಸೇರ್ಪಡೆಗೊಂಡ ಬಳಿಕ ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದರು. ಕಾಂಗ್ರೆಸ್ ನಾಯಕ ಲೋಕಸಭೆ ಆವರಣದಿಂದ ಹೊರನಡೆಯುತ್ತಿದ್ದಾಗ ಹಾಗೂ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿಲ್ಲ.

ಅವಿಶ್ವಾಸ ಗೊತ್ತುವಳಿ ಭಾಷಣ ಮುಗಿಸಿ ಲೋಕಸಭೆಯ ಆವರಣದಿಂದ ಹೊರಬರುತ್ತಿದ್ದ ರಾಹುಲ್ ಗಾಂಧಿ ಅವರ ಕೆಲವು ಕಡತಗಳು ಕೆಳಗೆ ಬಿದ್ದವು. ಆಗ ಅವುಗಳನ್ನು ತೆಗೆದುಕೊಳ್ಳಲು ರಾಹುಲ್ ಬಾಗಿದ ನಂತರ ಕೆಲವು ಬಿಜೆಪಿ ಸಂಸದರು ಅವರನ್ನು ನೋಡಿ ನಗಲು ಆರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಗ ರಾಹುಲ್ ಗಾಂಧಿ ಬಿಜೆಪಿ ಸದಸ್ಯರತ್ತ ಫ್ಲೈಯಿಂಗ್ ಕಿಸ್ ನೀಡಿ ಸದನದಿಂದ ಹೊರನಡೆದರು.

ಫ್ಲೈಯಿಂಗ್ ಕಿಸ್ ಕುರಿತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಹುಲ್ ಅವರನ್ನು ಸ್ತ್ರೀದ್ವೇಷ ಪುರುಷ ಎಂದು ಕರೆದಿದ್ದು, ಇದೊಂದು ಅಶ್ಲೀಲ ಕೃತ್ಯ ಎಂದು ಹೇಳಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

35 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

45 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

52 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago