BREAKING NEWS

ಸದನದಲ್ಲಿ ರಾಹುಲ್ ಗಾಂಧಿ ಅನುಚಿತ ವರ್ತನೆ ಆರೋಪ : ಸ್ಪೀಕರ್ ಗೆ ಬಿಜೆಪಿ ಮಹಿಳಾ ಸಂಸದೆಯರ ದೂರು

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು 21 ಮಹಿಳಾ ಬಿಜೆಪಿ ಸದಸ್ಯರ ಸಹಿ ಇರುವ ಪತ್ರವನ್ನು ಸ್ಪೀಕರ್ ಚೇಂಬರ್ ನಲ್ಲಿ ಸಲ್ಲಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸದನದಲ್ಲಿ ಮಹಿಳಾ ಸದಸ್ಯರ ಘನತೆಗೆ ಧಕ್ಕೆ ತಂದಿರುವುದಲ್ಲದೇ, ಈ ಸದನದ ಘನತೆಗೆ ಕುಂದು ತಂದಿರುವ ಇಂತಹ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಸದರಾಗಿ ಮರುಸೇರ್ಪಡೆಗೊಂಡ ಬಳಿಕ ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದರು. ಕಾಂಗ್ರೆಸ್ ನಾಯಕ ಲೋಕಸಭೆ ಆವರಣದಿಂದ ಹೊರನಡೆಯುತ್ತಿದ್ದಾಗ ಹಾಗೂ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿಲ್ಲ.

ಅವಿಶ್ವಾಸ ಗೊತ್ತುವಳಿ ಭಾಷಣ ಮುಗಿಸಿ ಲೋಕಸಭೆಯ ಆವರಣದಿಂದ ಹೊರಬರುತ್ತಿದ್ದ ರಾಹುಲ್ ಗಾಂಧಿ ಅವರ ಕೆಲವು ಕಡತಗಳು ಕೆಳಗೆ ಬಿದ್ದವು. ಆಗ ಅವುಗಳನ್ನು ತೆಗೆದುಕೊಳ್ಳಲು ರಾಹುಲ್ ಬಾಗಿದ ನಂತರ ಕೆಲವು ಬಿಜೆಪಿ ಸಂಸದರು ಅವರನ್ನು ನೋಡಿ ನಗಲು ಆರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಗ ರಾಹುಲ್ ಗಾಂಧಿ ಬಿಜೆಪಿ ಸದಸ್ಯರತ್ತ ಫ್ಲೈಯಿಂಗ್ ಕಿಸ್ ನೀಡಿ ಸದನದಿಂದ ಹೊರನಡೆದರು.

ಫ್ಲೈಯಿಂಗ್ ಕಿಸ್ ಕುರಿತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಹುಲ್ ಅವರನ್ನು ಸ್ತ್ರೀದ್ವೇಷ ಪುರುಷ ಎಂದು ಕರೆದಿದ್ದು, ಇದೊಂದು ಅಶ್ಲೀಲ ಕೃತ್ಯ ಎಂದು ಹೇಳಿದ್ದಾರೆ.

lokesh

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

2 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

6 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

11 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

11 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

11 hours ago