BREAKING NEWS

ಸದನದಲ್ಲಿ ರಾಹುಲ್ ಗಾಂಧಿ ಅನುಚಿತ ವರ್ತನೆ ಆರೋಪ : ಸ್ಪೀಕರ್ ಗೆ ಬಿಜೆಪಿ ಮಹಿಳಾ ಸಂಸದೆಯರ ದೂರು

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು 21 ಮಹಿಳಾ ಬಿಜೆಪಿ ಸದಸ್ಯರ ಸಹಿ ಇರುವ ಪತ್ರವನ್ನು ಸ್ಪೀಕರ್ ಚೇಂಬರ್ ನಲ್ಲಿ ಸಲ್ಲಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸದನದಲ್ಲಿ ಮಹಿಳಾ ಸದಸ್ಯರ ಘನತೆಗೆ ಧಕ್ಕೆ ತಂದಿರುವುದಲ್ಲದೇ, ಈ ಸದನದ ಘನತೆಗೆ ಕುಂದು ತಂದಿರುವ ಇಂತಹ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಸದರಾಗಿ ಮರುಸೇರ್ಪಡೆಗೊಂಡ ಬಳಿಕ ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದರು. ಕಾಂಗ್ರೆಸ್ ನಾಯಕ ಲೋಕಸಭೆ ಆವರಣದಿಂದ ಹೊರನಡೆಯುತ್ತಿದ್ದಾಗ ಹಾಗೂ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿಲ್ಲ.

ಅವಿಶ್ವಾಸ ಗೊತ್ತುವಳಿ ಭಾಷಣ ಮುಗಿಸಿ ಲೋಕಸಭೆಯ ಆವರಣದಿಂದ ಹೊರಬರುತ್ತಿದ್ದ ರಾಹುಲ್ ಗಾಂಧಿ ಅವರ ಕೆಲವು ಕಡತಗಳು ಕೆಳಗೆ ಬಿದ್ದವು. ಆಗ ಅವುಗಳನ್ನು ತೆಗೆದುಕೊಳ್ಳಲು ರಾಹುಲ್ ಬಾಗಿದ ನಂತರ ಕೆಲವು ಬಿಜೆಪಿ ಸಂಸದರು ಅವರನ್ನು ನೋಡಿ ನಗಲು ಆರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಗ ರಾಹುಲ್ ಗಾಂಧಿ ಬಿಜೆಪಿ ಸದಸ್ಯರತ್ತ ಫ್ಲೈಯಿಂಗ್ ಕಿಸ್ ನೀಡಿ ಸದನದಿಂದ ಹೊರನಡೆದರು.

ಫ್ಲೈಯಿಂಗ್ ಕಿಸ್ ಕುರಿತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಹುಲ್ ಅವರನ್ನು ಸ್ತ್ರೀದ್ವೇಷ ಪುರುಷ ಎಂದು ಕರೆದಿದ್ದು, ಇದೊಂದು ಅಶ್ಲೀಲ ಕೃತ್ಯ ಎಂದು ಹೇಳಿದ್ದಾರೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

6 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

6 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

6 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

6 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

6 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

6 hours ago