BREAKING NEWS

ಸದನದಲ್ಲಿ ರಾಹುಲ್ ಗಾಂಧಿ ಅನುಚಿತ ವರ್ತನೆ ಆರೋಪ : ಸ್ಪೀಕರ್ ಗೆ ಬಿಜೆಪಿ ಮಹಿಳಾ ಸಂಸದೆಯರ ದೂರು

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು 21 ಮಹಿಳಾ ಬಿಜೆಪಿ ಸದಸ್ಯರ ಸಹಿ ಇರುವ ಪತ್ರವನ್ನು ಸ್ಪೀಕರ್ ಚೇಂಬರ್ ನಲ್ಲಿ ಸಲ್ಲಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸದನದಲ್ಲಿ ಮಹಿಳಾ ಸದಸ್ಯರ ಘನತೆಗೆ ಧಕ್ಕೆ ತಂದಿರುವುದಲ್ಲದೇ, ಈ ಸದನದ ಘನತೆಗೆ ಕುಂದು ತಂದಿರುವ ಇಂತಹ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಸದರಾಗಿ ಮರುಸೇರ್ಪಡೆಗೊಂಡ ಬಳಿಕ ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದರು. ಕಾಂಗ್ರೆಸ್ ನಾಯಕ ಲೋಕಸಭೆ ಆವರಣದಿಂದ ಹೊರನಡೆಯುತ್ತಿದ್ದಾಗ ಹಾಗೂ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿಲ್ಲ.

ಅವಿಶ್ವಾಸ ಗೊತ್ತುವಳಿ ಭಾಷಣ ಮುಗಿಸಿ ಲೋಕಸಭೆಯ ಆವರಣದಿಂದ ಹೊರಬರುತ್ತಿದ್ದ ರಾಹುಲ್ ಗಾಂಧಿ ಅವರ ಕೆಲವು ಕಡತಗಳು ಕೆಳಗೆ ಬಿದ್ದವು. ಆಗ ಅವುಗಳನ್ನು ತೆಗೆದುಕೊಳ್ಳಲು ರಾಹುಲ್ ಬಾಗಿದ ನಂತರ ಕೆಲವು ಬಿಜೆಪಿ ಸಂಸದರು ಅವರನ್ನು ನೋಡಿ ನಗಲು ಆರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಗ ರಾಹುಲ್ ಗಾಂಧಿ ಬಿಜೆಪಿ ಸದಸ್ಯರತ್ತ ಫ್ಲೈಯಿಂಗ್ ಕಿಸ್ ನೀಡಿ ಸದನದಿಂದ ಹೊರನಡೆದರು.

ಫ್ಲೈಯಿಂಗ್ ಕಿಸ್ ಕುರಿತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಹುಲ್ ಅವರನ್ನು ಸ್ತ್ರೀದ್ವೇಷ ಪುರುಷ ಎಂದು ಕರೆದಿದ್ದು, ಇದೊಂದು ಅಶ್ಲೀಲ ಕೃತ್ಯ ಎಂದು ಹೇಳಿದ್ದಾರೆ.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

26 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

1 hour ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago