BREAKING NEWS

ರಾಹುಲ್‌ ಗಾಂಧಿಗೆ 3 ವರ್ಷ ಅವಧಿಗೆ ‘ಸಾಮಾನ್ಯ’ ಪಾಸ್‌ಪೋರ್ಟ್: ದೆಹಲಿ ಕೋರ್ಟ್ ಆದೇಶ

ನವದೆಹಲಿ: ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೂರು ವರ್ಷಗಳ ಕಾಲ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ)ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.

ಸಂಸದ ಸ್ಥಾನದಿಂದ ಅನರ್ಹ ಆಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ತಮಗಿದ್ದ ವಿಶೇಷ ಸವಲತ್ತುಗಳನ್ನು ಕಳೆದುಕೊಂಡಿದ್ದಾರೆ.

ರಾಹುಲ್​​​​ ಗಾಂಧಿ ಅವರು ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್​​ನ್ನು ಸರ್ಕಾರಕ್ಕೆ ಒಪ್ಪಿಸಿದ ನಂತರ ಅವರು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನ್ಯಾಯಲಯಕ್ಕೆ 10 ವರ್ಷಗಳ ಅನುಮತಿ ನೀಡಬೇಕು ಎಂದು ಮನವಿ ಮಾಡಿದ ರಾಹುಲ್​​ , ಇದಕ್ಕೆ ಒಪ್ಪದ ನ್ಯಾಯಲಯ 3 ವರ್ಷಗಳ ಕಾಲ ಅನುಮತಿ ನೀಡಿದೆ.

ರಾಹುಲ್ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಹಣಕಾಸು ದುರ್ಬಳಕೆ ಆರೋಪಗಳು ರಾಹುಲ್ ಗಾಂಧಿ ಅವರ ಮೇಲಿದೆ. ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಕೋರಿ ರಾಹುಲ್ ಗಾಂಧಿಯವರ ಮನವಿಗೆ ಶುಕ್ರವಾರದೊಳಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಬುಧವಾರದಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಸೂಚಿಸಿತ್ತು.

ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ್ದಾರೆ.

andolanait

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

35 mins ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

37 mins ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

3 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

5 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

5 hours ago