BREAKING NEWS

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅನರ್ಹ..!

ಹೊಸದಿಲ್ಲಿ : ಮೋದಿ ಉಪನಾಮ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ ದಿನಾಂಕದಿಂದ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿದೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಸೆರೆವಾಸಕ್ಕೆ ಒಳಗಾಗುವ ಸಂಸದ ಅಥವಾ ಶಾಸಕ ಆರು ವರ್ಷಗಳ ಕಾಲ ಅನರ್ಹಗೊಳ್ಳುತ್ತಾನೆ ಎಂದು ಜನಪ್ರತಿನಿಧಿ ಕಾಯ್ದೆ ಹೇಳುತ್ತದೆ. ರಾಹುಲ್ ಗಾಂಧಿ ಅವರು ಈ ಹಿಂದೆ ವಿರೋಧಿಸಿದ್ದ ನಿಯಮವೊಂದೇ ಅವರಿಗೆ ಈಗ ಉರುಳಾಗಿ ಪರಿಣಮಿಸಿದೆ. ಮೋದಿ ಉಪನಾಮದಬಗ್ಗೆ ಮಾತನಾಡಿದ್ದರ ಫಲವಾಗಿ ಈಗ ರಾಹುಲ್ ಗಾಂಧಿ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8 (4) ಅನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಈ ತೀರ್ಪನ್ನು ಅಮಾನ್ಯಗೊಳಿಸಲು ಯುಪಿಎ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿತ್ತು. ಇದರ ಅಡಿ ಜನಪ್ರತಿನಿಧಿಗಳು ಅನರ್ಹಗೊಳ್ಳುವುದನ್ನು ಮೂರು ತಿಂಗಳ ಕಾಲ ತಡೆಯಲು ಅವಕಾಶವಿತ್ತು. ಆದರೆ 2013ರ ಸೆಪ್ಟೆಂಬರ್ 28ರಂದು ಈ ಬಗ್ಗೆ ಹಿರಿಯ ನಾಯಕ ಅಜಯ್ ಮಾಕೆನ್ ಅವರು ಸುದ್ದಿಗೋಷ್ಠಿ ನಡೆಸುವಾಗ ಬಂದಿದ್ದ ರಾಹುಲ್ ಗಾಂಧಿ, ಸುಗ್ರೀವಾಜ್ಞೆಯ ಪ್ರತಿಯನ್ನು ಹರಿದುಹಾಕಿದ್ದರು.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago