ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.
ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ. ಮೋದಿಯವರೇ ಹೆದರಬೇಡಿ. ಸಾರ್ವಜನಿಕ ಜೀವನದಲ್ಲಿ ಇವೆಲ್ಲ ಸಾಮಾನ್ಯ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.
ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ದೇಶಕ್ಕಾಗಿ ಗುಂಡು ಹಾಕಿಸಿಕೊಂಡರು, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದರು. ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅವರು ಜನರ ಸಮಸ್ಯೆ ಬಗೆಹರಿಸುವ ಬದಲು ತಾವೇ ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಮೋದಿ ಅವರ ಕಚೇರಿಯಲ್ಲಿ ಪಟ್ಟಿ ಕೂಡ ಮಾಡುವುದಿಲ್ಲ. ಬದಲಾಗಿ ನನ್ನ ಎಷ್ಟು ಸಲ ಬೈದಿದ್ದಾರೆ ಅಂತ ಲಿಸ್ಟ್ ಮಾಡುತ್ತಾರೆ. ಇವರಿಗೆ ಬೈದಿದ್ದನ್ನು ನೋಡಿದ್ರೆ ಒಂದು ಪುಟ ಕೂಡ ತುಂಬಲ್ಲ. ಆದ್ರೆ ಗಾಂಧಿ ಕುಟುಂಬವನ್ನು ನಿಂದಿಸಿದ್ದನ್ನು ಪಟ್ಟಿ ಮಾಡಿದ್ರೆ ಪುಸ್ತಕಗಳ ಮೇಲೆ ಪುಸ್ತಕ ಪ್ರಿಂಟ್ ಹಾಕಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
“ಸ್ವಲ್ಪ ಧೈರ್ಯ ಮಾಡಿ ಮೋದಿಜಿ ಮತ್ತು ನನ್ನ ಸಹೋದರನಿಂದ ಕಲಿಯಿರಿ, ಅವರು ಸತ್ಯದ ಪರವಾಗಿ ನಿಲ್ಲುತ್ತಾರೆ, ನಿಂದಿಸಲಿ, ಗುಂಡು ಹಾರಿಸಲಿ ಅಥವಾ ಚಾಕುವಿನಿಂದ ಇರಿದರೂ ದೇಶದ ಜನರ ಪರವಾಗಿರುತ್ತೇನೆ ಎಂದು ರಾಹುಲ್ ಹೇಳಿದ್ದಾಗಿ ಪ್ರಿಯಾಂಕಾ ತಿಳಿಸಿದ್ದಾರೆ.
ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…
ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…