BREAKING NEWS

ದೇಶದ ಜನರಿಗಾಗಿ ಗುಂಡೇಟು ತಿನ್ನಲು ರಾಹುಲ್ ಸಿದ್ದ ನನ್ನ ತಮ್ಮನನ್ನು ನೋಡಿ ಕಲಿಯಿರಿ : ಮೋದಿಗೆ ಪ್ರಿಯಾಂಕಾ ಟಾಂಗ್

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.

ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ. ಮೋದಿಯವರೇ ಹೆದರಬೇಡಿ. ಸಾರ್ವಜನಿಕ ಜೀವನದಲ್ಲಿ ಇವೆಲ್ಲ ಸಾಮಾನ್ಯ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.

ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ದೇಶಕ್ಕಾಗಿ‌ ಗುಂಡು ಹಾಕಿಸಿಕೊಂಡರು, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದರು. ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅವರು ಜನರ‌ ಸಮಸ್ಯೆ ಬಗೆಹರಿಸುವ ಬದಲು ತಾವೇ ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಮೋದಿ ಅವರ ಕಚೇರಿಯಲ್ಲಿ ಪಟ್ಟಿ ಕೂಡ ಮಾಡುವುದಿಲ್ಲ. ಬದಲಾಗಿ ನನ್ನ ಎಷ್ಟು ಸಲ ಬೈದಿದ್ದಾರೆ ಅಂತ ಲಿಸ್ಟ್ ಮಾಡುತ್ತಾರೆ. ಇವರಿಗೆ ಬೈದಿದ್ದನ್ನು ನೋಡಿದ್ರೆ ಒಂದು ಪುಟ ಕೂಡ ತುಂಬಲ್ಲ. ಆದ್ರೆ ಗಾಂಧಿ ಕುಟುಂಬವನ್ನು ನಿಂದಿಸಿದ್ದನ್ನು ಪಟ್ಟಿ ಮಾಡಿದ್ರೆ ಪುಸ್ತಕಗಳ ಮೇಲೆ ಪುಸ್ತಕ ಪ್ರಿಂಟ್ ಹಾಕಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

“ಸ್ವಲ್ಪ ಧೈರ್ಯ ಮಾಡಿ ಮೋದಿಜಿ ಮತ್ತು ನನ್ನ ಸಹೋದರನಿಂದ ಕಲಿಯಿರಿ, ಅವರು ಸತ್ಯದ ಪರವಾಗಿ ನಿಲ್ಲುತ್ತಾರೆ, ನಿಂದಿಸಲಿ, ಗುಂಡು ಹಾರಿಸಲಿ ಅಥವಾ ಚಾಕುವಿನಿಂದ ಇರಿದರೂ ದೇಶದ ಜನರ ಪರವಾಗಿರುತ್ತೇನೆ ಎಂದು ರಾಹುಲ್ ಹೇಳಿದ್ದಾಗಿ ಪ್ರಿಯಾಂಕಾ ತಿಳಿಸಿದ್ದಾರೆ.

lokesh

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

21 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

49 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

1 hour ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

1 hour ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago