BREAKING NEWS

ದೇಶದ ಜನರಿಗಾಗಿ ಗುಂಡೇಟು ತಿನ್ನಲು ರಾಹುಲ್ ಸಿದ್ದ ನನ್ನ ತಮ್ಮನನ್ನು ನೋಡಿ ಕಲಿಯಿರಿ : ಮೋದಿಗೆ ಪ್ರಿಯಾಂಕಾ ಟಾಂಗ್

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.

ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ. ಮೋದಿಯವರೇ ಹೆದರಬೇಡಿ. ಸಾರ್ವಜನಿಕ ಜೀವನದಲ್ಲಿ ಇವೆಲ್ಲ ಸಾಮಾನ್ಯ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.

ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ದೇಶಕ್ಕಾಗಿ‌ ಗುಂಡು ಹಾಕಿಸಿಕೊಂಡರು, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದರು. ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅವರು ಜನರ‌ ಸಮಸ್ಯೆ ಬಗೆಹರಿಸುವ ಬದಲು ತಾವೇ ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಮೋದಿ ಅವರ ಕಚೇರಿಯಲ್ಲಿ ಪಟ್ಟಿ ಕೂಡ ಮಾಡುವುದಿಲ್ಲ. ಬದಲಾಗಿ ನನ್ನ ಎಷ್ಟು ಸಲ ಬೈದಿದ್ದಾರೆ ಅಂತ ಲಿಸ್ಟ್ ಮಾಡುತ್ತಾರೆ. ಇವರಿಗೆ ಬೈದಿದ್ದನ್ನು ನೋಡಿದ್ರೆ ಒಂದು ಪುಟ ಕೂಡ ತುಂಬಲ್ಲ. ಆದ್ರೆ ಗಾಂಧಿ ಕುಟುಂಬವನ್ನು ನಿಂದಿಸಿದ್ದನ್ನು ಪಟ್ಟಿ ಮಾಡಿದ್ರೆ ಪುಸ್ತಕಗಳ ಮೇಲೆ ಪುಸ್ತಕ ಪ್ರಿಂಟ್ ಹಾಕಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

“ಸ್ವಲ್ಪ ಧೈರ್ಯ ಮಾಡಿ ಮೋದಿಜಿ ಮತ್ತು ನನ್ನ ಸಹೋದರನಿಂದ ಕಲಿಯಿರಿ, ಅವರು ಸತ್ಯದ ಪರವಾಗಿ ನಿಲ್ಲುತ್ತಾರೆ, ನಿಂದಿಸಲಿ, ಗುಂಡು ಹಾರಿಸಲಿ ಅಥವಾ ಚಾಕುವಿನಿಂದ ಇರಿದರೂ ದೇಶದ ಜನರ ಪರವಾಗಿರುತ್ತೇನೆ ಎಂದು ರಾಹುಲ್ ಹೇಳಿದ್ದಾಗಿ ಪ್ರಿಯಾಂಕಾ ತಿಳಿಸಿದ್ದಾರೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

18 hours ago