ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.
ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ. ಮೋದಿಯವರೇ ಹೆದರಬೇಡಿ. ಸಾರ್ವಜನಿಕ ಜೀವನದಲ್ಲಿ ಇವೆಲ್ಲ ಸಾಮಾನ್ಯ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.
ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ದೇಶಕ್ಕಾಗಿ ಗುಂಡು ಹಾಕಿಸಿಕೊಂಡರು, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದರು. ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅವರು ಜನರ ಸಮಸ್ಯೆ ಬಗೆಹರಿಸುವ ಬದಲು ತಾವೇ ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಮೋದಿ ಅವರ ಕಚೇರಿಯಲ್ಲಿ ಪಟ್ಟಿ ಕೂಡ ಮಾಡುವುದಿಲ್ಲ. ಬದಲಾಗಿ ನನ್ನ ಎಷ್ಟು ಸಲ ಬೈದಿದ್ದಾರೆ ಅಂತ ಲಿಸ್ಟ್ ಮಾಡುತ್ತಾರೆ. ಇವರಿಗೆ ಬೈದಿದ್ದನ್ನು ನೋಡಿದ್ರೆ ಒಂದು ಪುಟ ಕೂಡ ತುಂಬಲ್ಲ. ಆದ್ರೆ ಗಾಂಧಿ ಕುಟುಂಬವನ್ನು ನಿಂದಿಸಿದ್ದನ್ನು ಪಟ್ಟಿ ಮಾಡಿದ್ರೆ ಪುಸ್ತಕಗಳ ಮೇಲೆ ಪುಸ್ತಕ ಪ್ರಿಂಟ್ ಹಾಕಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
“ಸ್ವಲ್ಪ ಧೈರ್ಯ ಮಾಡಿ ಮೋದಿಜಿ ಮತ್ತು ನನ್ನ ಸಹೋದರನಿಂದ ಕಲಿಯಿರಿ, ಅವರು ಸತ್ಯದ ಪರವಾಗಿ ನಿಲ್ಲುತ್ತಾರೆ, ನಿಂದಿಸಲಿ, ಗುಂಡು ಹಾರಿಸಲಿ ಅಥವಾ ಚಾಕುವಿನಿಂದ ಇರಿದರೂ ದೇಶದ ಜನರ ಪರವಾಗಿರುತ್ತೇನೆ ಎಂದು ರಾಹುಲ್ ಹೇಳಿದ್ದಾಗಿ ಪ್ರಿಯಾಂಕಾ ತಿಳಿಸಿದ್ದಾರೆ.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…