BREAKING NEWS

ದೇಶದ ಜನರಿಗಾಗಿ ಗುಂಡೇಟು ತಿನ್ನಲು ರಾಹುಲ್ ಸಿದ್ದ ನನ್ನ ತಮ್ಮನನ್ನು ನೋಡಿ ಕಲಿಯಿರಿ : ಮೋದಿಗೆ ಪ್ರಿಯಾಂಕಾ ಟಾಂಗ್

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.

ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ. ಮೋದಿಯವರೇ ಹೆದರಬೇಡಿ. ಸಾರ್ವಜನಿಕ ಜೀವನದಲ್ಲಿ ಇವೆಲ್ಲ ಸಾಮಾನ್ಯ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.

ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ದೇಶಕ್ಕಾಗಿ‌ ಗುಂಡು ಹಾಕಿಸಿಕೊಂಡರು, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದರು. ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅವರು ಜನರ‌ ಸಮಸ್ಯೆ ಬಗೆಹರಿಸುವ ಬದಲು ತಾವೇ ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಮೋದಿ ಅವರ ಕಚೇರಿಯಲ್ಲಿ ಪಟ್ಟಿ ಕೂಡ ಮಾಡುವುದಿಲ್ಲ. ಬದಲಾಗಿ ನನ್ನ ಎಷ್ಟು ಸಲ ಬೈದಿದ್ದಾರೆ ಅಂತ ಲಿಸ್ಟ್ ಮಾಡುತ್ತಾರೆ. ಇವರಿಗೆ ಬೈದಿದ್ದನ್ನು ನೋಡಿದ್ರೆ ಒಂದು ಪುಟ ಕೂಡ ತುಂಬಲ್ಲ. ಆದ್ರೆ ಗಾಂಧಿ ಕುಟುಂಬವನ್ನು ನಿಂದಿಸಿದ್ದನ್ನು ಪಟ್ಟಿ ಮಾಡಿದ್ರೆ ಪುಸ್ತಕಗಳ ಮೇಲೆ ಪುಸ್ತಕ ಪ್ರಿಂಟ್ ಹಾಕಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

“ಸ್ವಲ್ಪ ಧೈರ್ಯ ಮಾಡಿ ಮೋದಿಜಿ ಮತ್ತು ನನ್ನ ಸಹೋದರನಿಂದ ಕಲಿಯಿರಿ, ಅವರು ಸತ್ಯದ ಪರವಾಗಿ ನಿಲ್ಲುತ್ತಾರೆ, ನಿಂದಿಸಲಿ, ಗುಂಡು ಹಾರಿಸಲಿ ಅಥವಾ ಚಾಕುವಿನಿಂದ ಇರಿದರೂ ದೇಶದ ಜನರ ಪರವಾಗಿರುತ್ತೇನೆ ಎಂದು ರಾಹುಲ್ ಹೇಳಿದ್ದಾಗಿ ಪ್ರಿಯಾಂಕಾ ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

2 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

2 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

2 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

2 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

2 hours ago