BREAKING NEWS

ಸೋನಿಪತ್‌ಗೆ ರಾಹುಲ್‌ ಹಠಾತ್ ಭೇಟಿ: ರೈತರೊಂದಿಗೆ ಚರ್ಚೆ ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಸವಾರಿ!

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮವನ್ನು ತಲುಪಿದರು.

‘ಇದೊಂದು ಪೂರ್ವಸಿದ್ಧತೆಯಿಲ್ಲದ ಭೇಟಿ. ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ರಾಹುಲ್‌ ಜಿ ಭತ್ತ ನಾಟಿ ಕಾರ್ಯದಲ್ಲಿ ಭಾಗವಹಿಸಿದರು ಮತ್ತು ಟ್ರ್ಯಾಕ್ಟರ್ ಓಡಿಸಿದರು’ ಎಂದು ಸೋನಿಪತ್‌ನ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ಫೋನ್ ಮೂಲಕ ತಿಳಿಸಿದರು.

ಸ್ಥಳದಲ್ಲಿದ್ದ ಮಲಿಕ್, ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ಹೇಳಿದರು.

ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ರಾಹುಲ್ ಗಾಂಧಿಯವರು ಬಿಳಿ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಯಲ್ಲಿಯೇ ಸಂವಾದ ನಡೆಸಿ, ಭತ್ತ ನಾಟಿ ಮಾಡಿದ್ದಾರೆ.

ರಾಹುಲ್ ಗಾಂಧಿಯವರು ‘ಮೋದಿ ಉಪನಾಮ’ ಕುರಿತಾದ ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಹಿಂದೆ ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಮೇ 23ರಂದು ರಾಹುಲ್ ಗಾಂಧಿಯವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

andolanait

Recent Posts

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

4 mins ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

26 mins ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

54 mins ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

2 hours ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

2 hours ago