BREAKING NEWS

ಸೋನಿಪತ್‌ಗೆ ರಾಹುಲ್‌ ಹಠಾತ್ ಭೇಟಿ: ರೈತರೊಂದಿಗೆ ಚರ್ಚೆ ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಸವಾರಿ!

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮವನ್ನು ತಲುಪಿದರು.

‘ಇದೊಂದು ಪೂರ್ವಸಿದ್ಧತೆಯಿಲ್ಲದ ಭೇಟಿ. ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ರಾಹುಲ್‌ ಜಿ ಭತ್ತ ನಾಟಿ ಕಾರ್ಯದಲ್ಲಿ ಭಾಗವಹಿಸಿದರು ಮತ್ತು ಟ್ರ್ಯಾಕ್ಟರ್ ಓಡಿಸಿದರು’ ಎಂದು ಸೋನಿಪತ್‌ನ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ಫೋನ್ ಮೂಲಕ ತಿಳಿಸಿದರು.

ಸ್ಥಳದಲ್ಲಿದ್ದ ಮಲಿಕ್, ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ಹೇಳಿದರು.

ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ರಾಹುಲ್ ಗಾಂಧಿಯವರು ಬಿಳಿ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಯಲ್ಲಿಯೇ ಸಂವಾದ ನಡೆಸಿ, ಭತ್ತ ನಾಟಿ ಮಾಡಿದ್ದಾರೆ.

ರಾಹುಲ್ ಗಾಂಧಿಯವರು ‘ಮೋದಿ ಉಪನಾಮ’ ಕುರಿತಾದ ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಹಿಂದೆ ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಮೇ 23ರಂದು ರಾಹುಲ್ ಗಾಂಧಿಯವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

andolanait

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

14 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

25 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago