ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮವನ್ನು ತಲುಪಿದರು.
‘ಇದೊಂದು ಪೂರ್ವಸಿದ್ಧತೆಯಿಲ್ಲದ ಭೇಟಿ. ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ರಾಹುಲ್ ಜಿ ಭತ್ತ ನಾಟಿ ಕಾರ್ಯದಲ್ಲಿ ಭಾಗವಹಿಸಿದರು ಮತ್ತು ಟ್ರ್ಯಾಕ್ಟರ್ ಓಡಿಸಿದರು’ ಎಂದು ಸೋನಿಪತ್ನ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ಫೋನ್ ಮೂಲಕ ತಿಳಿಸಿದರು.
ಸ್ಥಳದಲ್ಲಿದ್ದ ಮಲಿಕ್, ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ಹೇಳಿದರು.
ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ರಾಹುಲ್ ಗಾಂಧಿಯವರು ಬಿಳಿ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಯಲ್ಲಿಯೇ ಸಂವಾದ ನಡೆಸಿ, ಭತ್ತ ನಾಟಿ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ‘ಮೋದಿ ಉಪನಾಮ’ ಕುರಿತಾದ ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಈ ಹಿಂದೆ ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಮೇ 23ರಂದು ರಾಹುಲ್ ಗಾಂಧಿಯವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ನಲ್ಲಿ ಪ್ರಯಾಣಿಸಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…