BREAKING NEWS

ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ : ಕೆರೆಯಂತಾದ ಸರ್ವಿಸ್ ರಸ್ತೆ

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಬಾರಿ ಮಳೆಬಂದಾಗಲೂ ಅವ್ಯವಸ್ಥೆಯ ಆಗರವಾಗುವ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತೆ ಜಲಾವೃತವಾಗಿ ಅವೈಜ್ಞಾನಿಕ ಕಾಮಗಾರಿಗೆ ಕನ್ನಡಿ ಹಿಡಿದಿದೆ. ಶುಕ್ರವಾರ ಸುರಿದ ಸಾಧಾರಣ ಮಳೆಯಿಂದಾಗಿ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕೆರೆಯಂತಾಗಿದೆ. ರಾಮನಗರ ಸಮೀಪದ ಕೆಂಪನಹಳ್ಳಿ ಗೇಟ್‌ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದ್ವಿಚಕ್ರ ಹಾಗೂ ಇತರ ಸಣ್ಣಪುಟ್ಟ ವಾಹನಗಳು ರಸ್ತೆ ದಾಟಲಾಗದೇ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದಾಗಿನಿಂದಲೂ ಇದೇ ಸಮಸ್ಯೆ ಇದೆ. ಕಳೆದ ವರ್ಷ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆ ಎರಡೂ ಕಡೆ ನೀರು ನಿಂತು, ವಾಹನಗಳು ಸಹ ಜಲಾವೃತಗೊಂಡಿದ್ದವು. ಇದೀಗ, ಅಕಾಲಿಕ ಮಳೆಗೆ ಸರ್ವಿಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ವಿಸ್ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಒಟ್ಟಾರೆ ಪ್ರತಿಬಾರಿ ಮಳೆ ಬಂದಾಗಲೂ ಸರ್ವಿಸ್ ರಸ್ತೆಯ ಸಂಚಾರ ಅಪಾಯಕ್ಕೆ ಆಹ್ವಾನ ನೀಡುತ್ತದೆ. ದುಬಾರಿ ಟೋಲ್ ವಸೂಲಿ ಮಾಡೋ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನು ಸಂಪೂರ್ಣ ಮರೆತಂತಿದೆ.

lokesh

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago