ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಬಾರಿ ಮಳೆಬಂದಾಗಲೂ ಅವ್ಯವಸ್ಥೆಯ ಆಗರವಾಗುವ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತೆ ಜಲಾವೃತವಾಗಿ ಅವೈಜ್ಞಾನಿಕ ಕಾಮಗಾರಿಗೆ ಕನ್ನಡಿ ಹಿಡಿದಿದೆ. ಶುಕ್ರವಾರ ಸುರಿದ ಸಾಧಾರಣ ಮಳೆಯಿಂದಾಗಿ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕೆರೆಯಂತಾಗಿದೆ. ರಾಮನಗರ ಸಮೀಪದ ಕೆಂಪನಹಳ್ಳಿ ಗೇಟ್ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದ್ವಿಚಕ್ರ ಹಾಗೂ ಇತರ ಸಣ್ಣಪುಟ್ಟ ವಾಹನಗಳು ರಸ್ತೆ ದಾಟಲಾಗದೇ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬೆಂಗಳೂರು-ಮೈಸೂರು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದಾಗಿನಿಂದಲೂ ಇದೇ ಸಮಸ್ಯೆ ಇದೆ. ಕಳೆದ ವರ್ಷ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆ ಎರಡೂ ಕಡೆ ನೀರು ನಿಂತು, ವಾಹನಗಳು ಸಹ ಜಲಾವೃತಗೊಂಡಿದ್ದವು. ಇದೀಗ, ಅಕಾಲಿಕ ಮಳೆಗೆ ಸರ್ವಿಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ವಿಸ್ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಒಟ್ಟಾರೆ ಪ್ರತಿಬಾರಿ ಮಳೆ ಬಂದಾಗಲೂ ಸರ್ವಿಸ್ ರಸ್ತೆಯ ಸಂಚಾರ ಅಪಾಯಕ್ಕೆ ಆಹ್ವಾನ ನೀಡುತ್ತದೆ. ದುಬಾರಿ ಟೋಲ್ ವಸೂಲಿ ಮಾಡೋ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನು ಸಂಪೂರ್ಣ ಮರೆತಂತಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…