BREAKING NEWS

ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ : ಕೆರೆಯಂತಾದ ಸರ್ವಿಸ್ ರಸ್ತೆ

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಬಾರಿ ಮಳೆಬಂದಾಗಲೂ ಅವ್ಯವಸ್ಥೆಯ ಆಗರವಾಗುವ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತೆ ಜಲಾವೃತವಾಗಿ ಅವೈಜ್ಞಾನಿಕ ಕಾಮಗಾರಿಗೆ ಕನ್ನಡಿ ಹಿಡಿದಿದೆ. ಶುಕ್ರವಾರ ಸುರಿದ ಸಾಧಾರಣ ಮಳೆಯಿಂದಾಗಿ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕೆರೆಯಂತಾಗಿದೆ. ರಾಮನಗರ ಸಮೀಪದ ಕೆಂಪನಹಳ್ಳಿ ಗೇಟ್‌ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದ್ವಿಚಕ್ರ ಹಾಗೂ ಇತರ ಸಣ್ಣಪುಟ್ಟ ವಾಹನಗಳು ರಸ್ತೆ ದಾಟಲಾಗದೇ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದಾಗಿನಿಂದಲೂ ಇದೇ ಸಮಸ್ಯೆ ಇದೆ. ಕಳೆದ ವರ್ಷ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆ ಎರಡೂ ಕಡೆ ನೀರು ನಿಂತು, ವಾಹನಗಳು ಸಹ ಜಲಾವೃತಗೊಂಡಿದ್ದವು. ಇದೀಗ, ಅಕಾಲಿಕ ಮಳೆಗೆ ಸರ್ವಿಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ವಿಸ್ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಒಟ್ಟಾರೆ ಪ್ರತಿಬಾರಿ ಮಳೆ ಬಂದಾಗಲೂ ಸರ್ವಿಸ್ ರಸ್ತೆಯ ಸಂಚಾರ ಅಪಾಯಕ್ಕೆ ಆಹ್ವಾನ ನೀಡುತ್ತದೆ. ದುಬಾರಿ ಟೋಲ್ ವಸೂಲಿ ಮಾಡೋ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನು ಸಂಪೂರ್ಣ ಮರೆತಂತಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago