BREAKING NEWS

ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ : ಕೆರೆಯಂತಾದ ಸರ್ವಿಸ್ ರಸ್ತೆ

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಬಾರಿ ಮಳೆಬಂದಾಗಲೂ ಅವ್ಯವಸ್ಥೆಯ ಆಗರವಾಗುವ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತೆ ಜಲಾವೃತವಾಗಿ ಅವೈಜ್ಞಾನಿಕ ಕಾಮಗಾರಿಗೆ ಕನ್ನಡಿ ಹಿಡಿದಿದೆ. ಶುಕ್ರವಾರ ಸುರಿದ ಸಾಧಾರಣ ಮಳೆಯಿಂದಾಗಿ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕೆರೆಯಂತಾಗಿದೆ. ರಾಮನಗರ ಸಮೀಪದ ಕೆಂಪನಹಳ್ಳಿ ಗೇಟ್‌ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದ್ವಿಚಕ್ರ ಹಾಗೂ ಇತರ ಸಣ್ಣಪುಟ್ಟ ವಾಹನಗಳು ರಸ್ತೆ ದಾಟಲಾಗದೇ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದಾಗಿನಿಂದಲೂ ಇದೇ ಸಮಸ್ಯೆ ಇದೆ. ಕಳೆದ ವರ್ಷ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆ ಎರಡೂ ಕಡೆ ನೀರು ನಿಂತು, ವಾಹನಗಳು ಸಹ ಜಲಾವೃತಗೊಂಡಿದ್ದವು. ಇದೀಗ, ಅಕಾಲಿಕ ಮಳೆಗೆ ಸರ್ವಿಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ವಿಸ್ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಒಟ್ಟಾರೆ ಪ್ರತಿಬಾರಿ ಮಳೆ ಬಂದಾಗಲೂ ಸರ್ವಿಸ್ ರಸ್ತೆಯ ಸಂಚಾರ ಅಪಾಯಕ್ಕೆ ಆಹ್ವಾನ ನೀಡುತ್ತದೆ. ದುಬಾರಿ ಟೋಲ್ ವಸೂಲಿ ಮಾಡೋ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನು ಸಂಪೂರ್ಣ ಮರೆತಂತಿದೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago