ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ.
ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ನಿನ್ನೆ ದೆಹಲಿಯಲ್ಲಿ 126 ಮಿ.ಮೀ ಮಳೆಯಾಗಿದೆ. ದೆಹಲಿಯಲ್ಲಿ ಪ್ರತಿ ಮುಂಗಾರಿನಲ್ಲಿ ಬೀಳುವ ಒಟ್ಟು ಶೇ 15 ರಷ್ಟು ಮಳೆ ಕೇವಲ 12 ಗಂಟೆಗಳಲ್ಲಿಯೇ ಸುರಿದಿದೆ. ಜಲಾವೃತದಿಂದಾಗಿ ಜನರು ತೀವ್ರ ತೊಂದರೆಗೀಡಾಗಿದ್ದಾರೆ’ ಎಂದಿದ್ದಾರೆ.
‘ಇಂದು, ದೆಹಲಿಯ ಎಲ್ಲಾ ಸಚಿವರು ಮತ್ತು ಮೇಯರ್ ಪ್ರದೇಶಗಳಿಗೆ ತೆರಳಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೆಲಸದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ಅವರ ಭಾನುವಾರದ ರಜೆಯನ್ನು ರದ್ದುಗೊಳಿಸಲಾಗಿದೆ’ ಎಂದು ಅವರು ಹೇಳಿದರು.
ಭಾನುವಾರದಂದು 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ದಾಖಲೆಯ 153 ಮಿಮೀ ಮಳೆ ಸುರಿದಿದೆ. ಇದು 1982 ರಿಂದೀಚೆಗೆ ಜುಲೈ ತಿಂಗಳಿನ ಒಂದೇ ದಿನದಲ್ಲಿ ಸುರಿದ ಅತಿಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 153 ಮಿಮೀ ಮಳೆ ಸುರಿದಿದೆ. ಜುಲೈ 25, 1982 ರಂದು 24 ಗಂಟೆಗಳಲ್ಲಿ ಸುರಿದ 169.9 ಮಿಮೀ ಮಳೆಯ ನಂತರ ಇದು ಅತಿ ಹೆಚ್ಚು ಎಂದು ಐಎಂಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…