BREAKING NEWS

ದೆಹಲಿಯಲ್ಲಿ ಮಳೆ: ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆ ರದ್ದುಗೊಳಿಸಿದ ಕೇಜ್ರಿವಾಲ್!

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ.

ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ನಿನ್ನೆ ದೆಹಲಿಯಲ್ಲಿ 126 ಮಿ.ಮೀ ಮಳೆಯಾಗಿದೆ. ದೆಹಲಿಯಲ್ಲಿ ಪ್ರತಿ ಮುಂಗಾರಿನಲ್ಲಿ ಬೀಳುವ ಒಟ್ಟು ಶೇ 15 ರಷ್ಟು ಮಳೆ ಕೇವಲ 12 ಗಂಟೆಗಳಲ್ಲಿಯೇ ಸುರಿದಿದೆ. ಜಲಾವೃತದಿಂದಾಗಿ ಜನರು ತೀವ್ರ ತೊಂದರೆಗೀಡಾಗಿದ್ದಾರೆ’ ಎಂದಿದ್ದಾರೆ.

‘ಇಂದು, ದೆಹಲಿಯ ಎಲ್ಲಾ ಸಚಿವರು ಮತ್ತು ಮೇಯರ್ ಪ್ರದೇಶಗಳಿಗೆ ತೆರಳಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೆಲಸದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ಅವರ ಭಾನುವಾರದ ರಜೆಯನ್ನು ರದ್ದುಗೊಳಿಸಲಾಗಿದೆ’ ಎಂದು ಅವರು ಹೇಳಿದರು.

ಭಾನುವಾರದಂದು 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ದಾಖಲೆಯ 153 ಮಿಮೀ ಮಳೆ ಸುರಿದಿದೆ. ಇದು 1982 ರಿಂದೀಚೆಗೆ ಜುಲೈ ತಿಂಗಳಿನ ಒಂದೇ ದಿನದಲ್ಲಿ ಸುರಿದ ಅತಿಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 153 ಮಿಮೀ ಮಳೆ ಸುರಿದಿದೆ. ಜುಲೈ 25, 1982 ರಂದು 24 ಗಂಟೆಗಳಲ್ಲಿ ಸುರಿದ 169.9 ಮಿಮೀ ಮಳೆಯ ನಂತರ ಇದು ಅತಿ ಹೆಚ್ಚು ಎಂದು ಐಎಂಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

5 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

5 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

5 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

5 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

5 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

6 hours ago