BREAKING NEWS

ದೆಹಲಿಯಲ್ಲಿ ಮಳೆ: ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆ ರದ್ದುಗೊಳಿಸಿದ ಕೇಜ್ರಿವಾಲ್!

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ.

ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ನಿನ್ನೆ ದೆಹಲಿಯಲ್ಲಿ 126 ಮಿ.ಮೀ ಮಳೆಯಾಗಿದೆ. ದೆಹಲಿಯಲ್ಲಿ ಪ್ರತಿ ಮುಂಗಾರಿನಲ್ಲಿ ಬೀಳುವ ಒಟ್ಟು ಶೇ 15 ರಷ್ಟು ಮಳೆ ಕೇವಲ 12 ಗಂಟೆಗಳಲ್ಲಿಯೇ ಸುರಿದಿದೆ. ಜಲಾವೃತದಿಂದಾಗಿ ಜನರು ತೀವ್ರ ತೊಂದರೆಗೀಡಾಗಿದ್ದಾರೆ’ ಎಂದಿದ್ದಾರೆ.

‘ಇಂದು, ದೆಹಲಿಯ ಎಲ್ಲಾ ಸಚಿವರು ಮತ್ತು ಮೇಯರ್ ಪ್ರದೇಶಗಳಿಗೆ ತೆರಳಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೆಲಸದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ಅವರ ಭಾನುವಾರದ ರಜೆಯನ್ನು ರದ್ದುಗೊಳಿಸಲಾಗಿದೆ’ ಎಂದು ಅವರು ಹೇಳಿದರು.

ಭಾನುವಾರದಂದು 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ದಾಖಲೆಯ 153 ಮಿಮೀ ಮಳೆ ಸುರಿದಿದೆ. ಇದು 1982 ರಿಂದೀಚೆಗೆ ಜುಲೈ ತಿಂಗಳಿನ ಒಂದೇ ದಿನದಲ್ಲಿ ಸುರಿದ ಅತಿಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 153 ಮಿಮೀ ಮಳೆ ಸುರಿದಿದೆ. ಜುಲೈ 25, 1982 ರಂದು 24 ಗಂಟೆಗಳಲ್ಲಿ ಸುರಿದ 169.9 ಮಿಮೀ ಮಳೆಯ ನಂತರ ಇದು ಅತಿ ಹೆಚ್ಚು ಎಂದು ಐಎಂಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

6 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

7 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

12 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

15 hours ago