ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರದಲ್ಲಿ ಮಳೆಯಾಗಿದ್ದು, ಈ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿರುವ ವರದಿಯಾಗಿದೆ. ಚಾಮರಾಜನಗರದ ಮಂಬಳ್ಳಿ ಗ್ರಾಮದಲ್ಲಿ 81.5 ಮಿಮೀ ಮಳೆಯಾಗಿದ್ದರೆ, ಕುಣಗಳ್ಳಿಯಲ್ಲಿ 64.5 ಮಿಮೀ ಮಳೆಯಾಗಿದೆ. ರಾಮನಗರದ ಕೋಡಿಹಳ್ಳಿಯಲ್ಲಿ 70.5 ಮಿಮೀ ಮಳೆಯಾಗಿರುವ ವರದಿಯಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಹೆಣ್ಣಾಗರದಲ್ಲಿ 67 ಮಿಮೀ ಮಳೆಯಾಗಿದ್ದು, ಥಾರಾಳುವಿನಲ್ಲಿ 64.5 ಮಿಮೀ ಮಳೆಯಾಗಿದೆ. ಇನ್ನು, ಮೈಸೂರಿನಲ್ಲಿ 57 ಮಿಮೀ ಮಳೆಯಾಗಿದ್ದು, ಮಂಡ್ಯದಲ್ಲಿ 45.5 ಮಿಮೀ, ಕೋಲಾರದಲ್ಲಿ 35.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ : ಬೆಂಗಳೂರಿನ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕೆಆರ್ ಮಾರುಕಟ್ಟೆ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್ ಸೇರಿ ಹಲವು ಕಡೆಗಳಲ್ ಲಿಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಬಲವಾದ ಗಾಳಿ ಬೀಸಿದೆ. ಈ ನಡುವೆ, ನಗರದಲ್ಲಿ ಇನ್ನೂ ಎರಡು ದಿನ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 7ರವರೆಗೂ ಮಳೆ ಮುನ್ಸೂಚನೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 5ರವರೆಗೆ ದಕ್ಷಿಣ ಒಳನಾಡಿನಲ್ಲಿ, ಏಪ್ರಿಲ್ 6 ಮತ್ತು ಏಪ್ರಿಲ್ 7ರಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…