ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರದಲ್ಲಿ ಮಳೆಯಾಗಿದ್ದು, ಈ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿರುವ ವರದಿಯಾಗಿದೆ. ಚಾಮರಾಜನಗರದ ಮಂಬಳ್ಳಿ ಗ್ರಾಮದಲ್ಲಿ 81.5 ಮಿಮೀ ಮಳೆಯಾಗಿದ್ದರೆ, ಕುಣಗಳ್ಳಿಯಲ್ಲಿ 64.5 ಮಿಮೀ ಮಳೆಯಾಗಿದೆ. ರಾಮನಗರದ ಕೋಡಿಹಳ್ಳಿಯಲ್ಲಿ 70.5 ಮಿಮೀ ಮಳೆಯಾಗಿರುವ ವರದಿಯಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಹೆಣ್ಣಾಗರದಲ್ಲಿ 67 ಮಿಮೀ ಮಳೆಯಾಗಿದ್ದು, ಥಾರಾಳುವಿನಲ್ಲಿ 64.5 ಮಿಮೀ ಮಳೆಯಾಗಿದೆ. ಇನ್ನು, ಮೈಸೂರಿನಲ್ಲಿ 57 ಮಿಮೀ ಮಳೆಯಾಗಿದ್ದು, ಮಂಡ್ಯದಲ್ಲಿ 45.5 ಮಿಮೀ, ಕೋಲಾರದಲ್ಲಿ 35.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ : ಬೆಂಗಳೂರಿನ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕೆಆರ್ ಮಾರುಕಟ್ಟೆ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್ ಸೇರಿ ಹಲವು ಕಡೆಗಳಲ್ ಲಿಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಬಲವಾದ ಗಾಳಿ ಬೀಸಿದೆ. ಈ ನಡುವೆ, ನಗರದಲ್ಲಿ ಇನ್ನೂ ಎರಡು ದಿನ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 7ರವರೆಗೂ ಮಳೆ ಮುನ್ಸೂಚನೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 5ರವರೆಗೆ ದಕ್ಷಿಣ ಒಳನಾಡಿನಲ್ಲಿ, ಏಪ್ರಿಲ್ 6 ಮತ್ತು ಏಪ್ರಿಲ್ 7ರಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…