BREAKING NEWS

ರಾಜ್ಯದಲ್ಲಿ ವರುಣನ ಅಬ್ಬರ ; ಚಾಮರಾಜನಗರದ ಮಂಬಳಿಯಲ್ಲಿ ದಾಖಲೆಯ ಮಳೆ

ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್‌ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ರಾಮನಗರ, ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರದಲ್ಲಿ ಮಳೆಯಾಗಿದ್ದು, ಈ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿರುವ ವರದಿಯಾಗಿದೆ. ಚಾಮರಾಜನಗರದ ಮಂಬಳ್ಳಿ ಗ್ರಾಮದಲ್ಲಿ 81.5 ಮಿಮೀ ಮಳೆಯಾಗಿದ್ದರೆ, ಕುಣಗಳ್ಳಿಯಲ್ಲಿ 64.5 ಮಿಮೀ ಮಳೆಯಾಗಿದೆ. ರಾಮನಗರದ ಕೋಡಿಹಳ್ಳಿಯಲ್ಲಿ 70.5 ಮಿಮೀ ಮಳೆಯಾಗಿರುವ ವರದಿಯಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಹೆಣ್ಣಾಗರದಲ್ಲಿ 67 ಮಿಮೀ ಮಳೆಯಾಗಿದ್ದು, ಥಾರಾಳುವಿನಲ್ಲಿ 64.5 ಮಿಮೀ ಮಳೆಯಾಗಿದೆ. ಇನ್ನು, ಮೈಸೂರಿನಲ್ಲಿ 57 ಮಿಮೀ ಮಳೆಯಾಗಿದ್ದು, ಮಂಡ್ಯದಲ್ಲಿ 45.5 ಮಿಮೀ, ಕೋಲಾರದಲ್ಲಿ 35.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ : ಬೆಂಗಳೂರಿನ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕೆಆರ್‌ ಮಾರುಕಟ್ಟೆ, ಕಾರ್ಪೊರೇಷನ್‌, ರಿಚ್ಮಂಡ್‌ ಸರ್ಕಲ್‌ ಸೇರಿ ಹಲವು ಕಡೆಗಳಲ್ ಲಿಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಬಲವಾದ ಗಾಳಿ ಬೀಸಿದೆ. ಈ ನಡುವೆ, ನಗರದಲ್ಲಿ ಇನ್ನೂ ಎರಡು ದಿನ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‌ 7ರವರೆಗೂ ಮಳೆ ಮುನ್ಸೂಚನೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ 5ರವರೆಗೆ ದಕ್ಷಿಣ ಒಳನಾಡಿನಲ್ಲಿ, ಏಪ್ರಿಲ್‌ 6 ಮತ್ತು ಏಪ್ರಿಲ್‌ 7ರಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago