BREAKING NEWS

ರಾಜಾ ಹುಲಿ ಮೋದಿ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣವಲ್ಲ : ಸಿದ್ದರಾಮಯ್ಯ

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ (ಟ್ವಿಟ್ಟರ್) ನಲ್ಲಿ ಸರಣಿ ಟ್ವೀಟ್ ಮಾಡಿ, ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ.

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ.

ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ಕರ್ನಾಟಕ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಪಿಎಂ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಜೆಪಿ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮೊನ್ನೆ ಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಖಾರವಾಗಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ.

ಬಿಪಿಜೆ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸಿದ್ದಾರೆ.

https://x.com/siddaramaiah/status/1720349883725734392?s=20

lokesh

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

28 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago