ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ ಸಿ.ಆರ್.ಕೇಶವನ್ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಕಳೆದ ಫೆಬ್ರುವರಿ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಶನಿವಾರ ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ ಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸುಧಾರಣೆ, ಆರ್ಥಿಕ ಅಭಿವೃದ್ಧಿ ಕಾರ್ಯಸೂಚಿ ನನಗೆ ಇಷ್ಟವಾಗಿದೆ. ದೇಶದ ಆರ್ಥಿಕತೆಯನ್ನು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸಿದ್ದಾರೆ. ಈ ಕಾರಣಗಳಿಗೆ ನಾನು ಬಿಜೆಪಿ ಸೇರಿದ್ದಾನೆ ಎಂದು ಕೇಶವನ್ ಹೇಳಿದ್ದಾರೆ.
ಈ ಹಿಂದೆ ಕೇಶವನ್ ಅವರು ಎರಡು ದಶಕಗಳ ಕಾಲ ತಮಿಳುನಾಡು ಕಾಂಗ್ರೆಸ್ ಘಟಕ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಕೆಲಸ ಮಾಡಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…