BREAKING NEWS

ರಾಜಸ್ಥಾನ್‌ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಜಯ, ಏನು ಹೇಳುತ್ತಿವೆ ಸಮೀಕ್ಷೆಗಳು?

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ. ಇನ್ನು ಫಲಿತಾಂಶ ಡಿಸೆಂಬರ್‌ 3ರಂದು ಹೊರಬೀಳಲಿದ್ದು ಇಂದು ( ನವೆಂಬರ್‌ 30 ) ವಿವಿಧ ಮಾಧ್ಯಮ ಏಜೆನ್ಸಿಗಳು ಎಕ್ಸಿಟ್‌ ಪೋಲ್‌ಗಳನ್ನು ಘೋಷಿಸಿವೆ.

ಕಳೆದ ಬಾರಿ 99 ಸ್ಥಾನಗಳನ್ನು ಗೆದ್ದು ಇನ್ನೊಂದು ಸ್ಥಾನದ ಬೆಂಬಲವನ್ನು ಬಹುಜನ ಸಮಾಜವಾದಿ ಪಕ್ಷದಿಂದ ಪಡೆದುಕೊಂಡು ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್‌ ಈ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರೆ, ಸೋಲನ್ನು ಅನುಭವಿಸಿದ್ದ ಬಿಜೆಪಿ ಬಹುಮತ ಪಡೆಯುವ ನಿರೀಕ್ಷೆಯಲ್ಲಿದೆ. ಹಾಗಿದ್ದರೆ ಯಾವ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

* ಸಟ್ಟಾ ಬಜಾರ್‌ ಬಿಜೆಪಿ 115 ಸ್ಥಾನಗಳಲ್ಲಿ ಗೆದ್ದರೆ, ಕಾಂಗ್ರೆಸ್‌ 68 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ.
* ಸಿಎನ್‌ಎನ್‌ – ನ್ಯೂಸ್‌ 18 ಎಕ್ಸಿಟ್‌ ಪೋಲ್‌ ಪ್ರಕಾರ ಬಿಜೆಪಿ 111 ಸ್ಥಾನ, ಕಾಂಗ್ರೆಸ್‌ 74 ಸ್ಥಾನ, ಇತರೆ 14 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಜನ್‌ ಕಿ ಬಾತ್‌ ವರದಿ ಪ್ರಕಾರ ಬಿಜೆಪಿ 100 ರಿಂದ 122 ಸ್ಥಾನ, ಕಾಂಗ್ರೆಸ್‌ 62 ರಿಂದ 85 ಹಾಗೂ ಇತರೆ 14 ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿದು ಬಂದಿದೆ.
* ಟಿವಿ9 ಭಾರತ್‌ವರ್ಷ್‌ ಪೋಲ್‌ಸ್ಟ್ರಾಟ್‌ ಎಕ್ಸಿಟ್‌ ಪೋಲ್‌ ಬಿಜೆಪಿ 100 ರಿಂದ 110 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್‌ 90ರಿಂದ 100 ಹಾಗೂ ಇತರೆ 5ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಟೈಮ್ಸ್‌ ನೌ ಇಟಿಜಿ ಬಿಜೆಪಿ 110ರಿಂದ 128 ಸ್ಥಾನ, ಕಾಂಗ್ರೆಸ್‌ 56-72 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.

* ಏಕ್ಸಿಸ್‌ ಮೈ ಇಂಡಿಯಾ ಟುಡೇ ಎಕ್ಸಿಟ್‌ ಪೋಲ್‌ ಕಾಂಗ್ರೆಸ್‌ 86 ರಿಂದ 106 ಸ್ಥಾನಗಳಲ್ಲಿ ಗೆಲ್ಲಲಿದ್ದರೆ, ಬಿಜೆಪಿ 80ರಿಂದ 100 ಸ್ಥಾನಗಳಲ್ಲಿ ಗೆಲ್ಲಲಿದೆ, ಇತರೆ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು 9ರಿಂದ 18 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ತಿಳಿಸಿದೆ.

* ಸಿ ವೋಟರ್‌ ಪ್ರಕಾರ ಕಾಂಗ್ರೆಸ್‌ 127 ರಿಂದ 135, ಬಿಜೆಪಿ 87 ರಿಂದ 105 ಹಾಗೂ ಇತರರು 5ರಿಂದ 15 ಸೀಟ್‌ ಗೆಲ್ಲಬಹುದು ಎಂದು ವರದಿ ಮಾಡಲಾಗಿದೆ.

* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 80ರಿಂದ 90, ಕಾಂಗ್ರೆಸ್‌ 94ರಿಂದ 104 ಹಾಗೂ ಇತರೆ ಪಕ್ಷಗಳು 14ರಿಂದ 18 ಸ್ಥಾನಗಳಲ್ಲಿ ಗೆಲ್ಲಲಿವೆ.
* ಮೆಟ್ರೈಜ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 125 ರಿಂದ 135, ಬಿಜೆಪಿ 87 ರಿಂದ 107 ಹಾಗೂ ಇತರೆ ಪಕ್ಷಗಳು 8 ರಿಂದ 105 ಸ್ಥಾನಗಳಲ್ಲಿ ಗೆಲ್ಲಲಿದೆ.

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago