BREAKING NEWS

ರಾಜಸ್ಥಾನ್‌ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಜಯ, ಏನು ಹೇಳುತ್ತಿವೆ ಸಮೀಕ್ಷೆಗಳು?

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ. ಇನ್ನು ಫಲಿತಾಂಶ ಡಿಸೆಂಬರ್‌ 3ರಂದು ಹೊರಬೀಳಲಿದ್ದು ಇಂದು ( ನವೆಂಬರ್‌ 30 ) ವಿವಿಧ ಮಾಧ್ಯಮ ಏಜೆನ್ಸಿಗಳು ಎಕ್ಸಿಟ್‌ ಪೋಲ್‌ಗಳನ್ನು ಘೋಷಿಸಿವೆ.

ಕಳೆದ ಬಾರಿ 99 ಸ್ಥಾನಗಳನ್ನು ಗೆದ್ದು ಇನ್ನೊಂದು ಸ್ಥಾನದ ಬೆಂಬಲವನ್ನು ಬಹುಜನ ಸಮಾಜವಾದಿ ಪಕ್ಷದಿಂದ ಪಡೆದುಕೊಂಡು ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್‌ ಈ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರೆ, ಸೋಲನ್ನು ಅನುಭವಿಸಿದ್ದ ಬಿಜೆಪಿ ಬಹುಮತ ಪಡೆಯುವ ನಿರೀಕ್ಷೆಯಲ್ಲಿದೆ. ಹಾಗಿದ್ದರೆ ಯಾವ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

* ಸಟ್ಟಾ ಬಜಾರ್‌ ಬಿಜೆಪಿ 115 ಸ್ಥಾನಗಳಲ್ಲಿ ಗೆದ್ದರೆ, ಕಾಂಗ್ರೆಸ್‌ 68 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ.
* ಸಿಎನ್‌ಎನ್‌ – ನ್ಯೂಸ್‌ 18 ಎಕ್ಸಿಟ್‌ ಪೋಲ್‌ ಪ್ರಕಾರ ಬಿಜೆಪಿ 111 ಸ್ಥಾನ, ಕಾಂಗ್ರೆಸ್‌ 74 ಸ್ಥಾನ, ಇತರೆ 14 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಜನ್‌ ಕಿ ಬಾತ್‌ ವರದಿ ಪ್ರಕಾರ ಬಿಜೆಪಿ 100 ರಿಂದ 122 ಸ್ಥಾನ, ಕಾಂಗ್ರೆಸ್‌ 62 ರಿಂದ 85 ಹಾಗೂ ಇತರೆ 14 ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿದು ಬಂದಿದೆ.
* ಟಿವಿ9 ಭಾರತ್‌ವರ್ಷ್‌ ಪೋಲ್‌ಸ್ಟ್ರಾಟ್‌ ಎಕ್ಸಿಟ್‌ ಪೋಲ್‌ ಬಿಜೆಪಿ 100 ರಿಂದ 110 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್‌ 90ರಿಂದ 100 ಹಾಗೂ ಇತರೆ 5ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಟೈಮ್ಸ್‌ ನೌ ಇಟಿಜಿ ಬಿಜೆಪಿ 110ರಿಂದ 128 ಸ್ಥಾನ, ಕಾಂಗ್ರೆಸ್‌ 56-72 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.

* ಏಕ್ಸಿಸ್‌ ಮೈ ಇಂಡಿಯಾ ಟುಡೇ ಎಕ್ಸಿಟ್‌ ಪೋಲ್‌ ಕಾಂಗ್ರೆಸ್‌ 86 ರಿಂದ 106 ಸ್ಥಾನಗಳಲ್ಲಿ ಗೆಲ್ಲಲಿದ್ದರೆ, ಬಿಜೆಪಿ 80ರಿಂದ 100 ಸ್ಥಾನಗಳಲ್ಲಿ ಗೆಲ್ಲಲಿದೆ, ಇತರೆ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು 9ರಿಂದ 18 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ತಿಳಿಸಿದೆ.

* ಸಿ ವೋಟರ್‌ ಪ್ರಕಾರ ಕಾಂಗ್ರೆಸ್‌ 127 ರಿಂದ 135, ಬಿಜೆಪಿ 87 ರಿಂದ 105 ಹಾಗೂ ಇತರರು 5ರಿಂದ 15 ಸೀಟ್‌ ಗೆಲ್ಲಬಹುದು ಎಂದು ವರದಿ ಮಾಡಲಾಗಿದೆ.

* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 80ರಿಂದ 90, ಕಾಂಗ್ರೆಸ್‌ 94ರಿಂದ 104 ಹಾಗೂ ಇತರೆ ಪಕ್ಷಗಳು 14ರಿಂದ 18 ಸ್ಥಾನಗಳಲ್ಲಿ ಗೆಲ್ಲಲಿವೆ.
* ಮೆಟ್ರೈಜ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 125 ರಿಂದ 135, ಬಿಜೆಪಿ 87 ರಿಂದ 107 ಹಾಗೂ ಇತರೆ ಪಕ್ಷಗಳು 8 ರಿಂದ 105 ಸ್ಥಾನಗಳಲ್ಲಿ ಗೆಲ್ಲಲಿದೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago