BREAKING NEWS

ರಾಜಸ್ಥಾನ್‌ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಜಯ, ಏನು ಹೇಳುತ್ತಿವೆ ಸಮೀಕ್ಷೆಗಳು?

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ. ಇನ್ನು ಫಲಿತಾಂಶ ಡಿಸೆಂಬರ್‌ 3ರಂದು ಹೊರಬೀಳಲಿದ್ದು ಇಂದು ( ನವೆಂಬರ್‌ 30 ) ವಿವಿಧ ಮಾಧ್ಯಮ ಏಜೆನ್ಸಿಗಳು ಎಕ್ಸಿಟ್‌ ಪೋಲ್‌ಗಳನ್ನು ಘೋಷಿಸಿವೆ.

ಕಳೆದ ಬಾರಿ 99 ಸ್ಥಾನಗಳನ್ನು ಗೆದ್ದು ಇನ್ನೊಂದು ಸ್ಥಾನದ ಬೆಂಬಲವನ್ನು ಬಹುಜನ ಸಮಾಜವಾದಿ ಪಕ್ಷದಿಂದ ಪಡೆದುಕೊಂಡು ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್‌ ಈ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರೆ, ಸೋಲನ್ನು ಅನುಭವಿಸಿದ್ದ ಬಿಜೆಪಿ ಬಹುಮತ ಪಡೆಯುವ ನಿರೀಕ್ಷೆಯಲ್ಲಿದೆ. ಹಾಗಿದ್ದರೆ ಯಾವ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

* ಸಟ್ಟಾ ಬಜಾರ್‌ ಬಿಜೆಪಿ 115 ಸ್ಥಾನಗಳಲ್ಲಿ ಗೆದ್ದರೆ, ಕಾಂಗ್ರೆಸ್‌ 68 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ.
* ಸಿಎನ್‌ಎನ್‌ – ನ್ಯೂಸ್‌ 18 ಎಕ್ಸಿಟ್‌ ಪೋಲ್‌ ಪ್ರಕಾರ ಬಿಜೆಪಿ 111 ಸ್ಥಾನ, ಕಾಂಗ್ರೆಸ್‌ 74 ಸ್ಥಾನ, ಇತರೆ 14 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಜನ್‌ ಕಿ ಬಾತ್‌ ವರದಿ ಪ್ರಕಾರ ಬಿಜೆಪಿ 100 ರಿಂದ 122 ಸ್ಥಾನ, ಕಾಂಗ್ರೆಸ್‌ 62 ರಿಂದ 85 ಹಾಗೂ ಇತರೆ 14 ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿದು ಬಂದಿದೆ.
* ಟಿವಿ9 ಭಾರತ್‌ವರ್ಷ್‌ ಪೋಲ್‌ಸ್ಟ್ರಾಟ್‌ ಎಕ್ಸಿಟ್‌ ಪೋಲ್‌ ಬಿಜೆಪಿ 100 ರಿಂದ 110 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್‌ 90ರಿಂದ 100 ಹಾಗೂ ಇತರೆ 5ರಿಂದ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.
* ಟೈಮ್ಸ್‌ ನೌ ಇಟಿಜಿ ಬಿಜೆಪಿ 110ರಿಂದ 128 ಸ್ಥಾನ, ಕಾಂಗ್ರೆಸ್‌ 56-72 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.

* ಏಕ್ಸಿಸ್‌ ಮೈ ಇಂಡಿಯಾ ಟುಡೇ ಎಕ್ಸಿಟ್‌ ಪೋಲ್‌ ಕಾಂಗ್ರೆಸ್‌ 86 ರಿಂದ 106 ಸ್ಥಾನಗಳಲ್ಲಿ ಗೆಲ್ಲಲಿದ್ದರೆ, ಬಿಜೆಪಿ 80ರಿಂದ 100 ಸ್ಥಾನಗಳಲ್ಲಿ ಗೆಲ್ಲಲಿದೆ, ಇತರೆ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು 9ರಿಂದ 18 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ತಿಳಿಸಿದೆ.

* ಸಿ ವೋಟರ್‌ ಪ್ರಕಾರ ಕಾಂಗ್ರೆಸ್‌ 127 ರಿಂದ 135, ಬಿಜೆಪಿ 87 ರಿಂದ 105 ಹಾಗೂ ಇತರರು 5ರಿಂದ 15 ಸೀಟ್‌ ಗೆಲ್ಲಬಹುದು ಎಂದು ವರದಿ ಮಾಡಲಾಗಿದೆ.

* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 80ರಿಂದ 90, ಕಾಂಗ್ರೆಸ್‌ 94ರಿಂದ 104 ಹಾಗೂ ಇತರೆ ಪಕ್ಷಗಳು 14ರಿಂದ 18 ಸ್ಥಾನಗಳಲ್ಲಿ ಗೆಲ್ಲಲಿವೆ.
* ಮೆಟ್ರೈಜ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 125 ರಿಂದ 135, ಬಿಜೆಪಿ 87 ರಿಂದ 107 ಹಾಗೂ ಇತರೆ ಪಕ್ಷಗಳು 8 ರಿಂದ 105 ಸ್ಥಾನಗಳಲ್ಲಿ ಗೆಲ್ಲಲಿದೆ.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

5 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

6 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

6 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

7 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

7 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 hours ago