ಜೈಪುರ: ಐಎಎಸ್ ಮತ್ತು ಆರ್ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಚಾಲನೆ ನೀಡಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್ಎಸ್ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜಸ್ಥಾನ ವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ನೀಡಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ನಡೆಸಲು ಆಸಕ್ತಿ ಹೊಂದಿರುವವರಿಗೆ ಅನುಕೂಲವಾಗಲೇಂದು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ರಕ್ಷಾಬಂಧನ ಹಬ್ಬದ ಭಾಗವಾಗಿ 40 ಲಕ್ಷ ಕುಟುಂಬಗಳ ಹೆಣ್ಣು ಮಕ್ಕಳಿಗೆ, ಮೂರು ವರ್ಷಗಳ ಉಚಿತ ಇಂಟರ್ನೆಟ್ ಸೇವೆಯೊಂದಿಗೆ ಮೊಬೈಲ್ ಫೋನ್ಗಳನ್ನು ವಿತರಿಸಲಾಗುವುದು ಎಂದು ಗೆಹಲೋತ್ ತಿಳಿಸಿದ್ದಾರೆ.
ಸರ್ಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ. ಗ್ರಾಮೀಣ ಜನರಿಗೆ ಮಾಹಿತಿ ನೀಡುವ ಕೆಲಸ ಎನ್ಎಸ್ಯುಐ ಮಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕರಿಗೆ (ಸ್ವಿಗ್ಗಿ, ಜೊಮ್ಯಾಟೊ, ಓಲಾ, ಉಬರ್ ಮುಂತಾದ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ) ಕ್ಷೇಮಾಭಿವೃದ್ಧಿ ನಿಗಮ ಸ್ಥಾಪಿಸಿ,200 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…