BREAKING NEWS

ರಾಜಸ್ಥಾನ| ಐಎಎಸ್, ಆರ್‌ಎಎಸ್‌ಗೆ ಉಚಿತ ತರಬೇತಿ: ಅಶೋಕ್ ಗೆಹಲೋತ್

ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಚಾಲನೆ ನೀಡಿದ್ದಾರೆ.

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಸ್ಥಾನ ವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ನೀಡಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ನಡೆಸಲು ಆಸಕ್ತಿ ಹೊಂದಿರುವವರಿಗೆ ಅನುಕೂಲವಾಗಲೇಂದು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.

ರಕ್ಷಾಬಂಧನ ಹಬ್ಬದ ಭಾಗವಾಗಿ 40 ಲಕ್ಷ ಕುಟುಂಬಗಳ ಹೆಣ್ಣು ಮಕ್ಕಳಿಗೆ, ಮೂರು ವರ್ಷಗಳ ಉಚಿತ ಇಂಟರ್ನೆಟ್ ಸೇವೆಯೊಂದಿಗೆ ಮೊಬೈಲ್‌ ಫೋನ್‌ಗಳನ್ನು ವಿತರಿಸಲಾಗುವುದು ಎಂದು ಗೆಹಲೋತ್ ತಿಳಿಸಿದ್ದಾರೆ.

ಸರ್ಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ. ಗ್ರಾಮೀಣ ಜನರಿಗೆ ಮಾಹಿತಿ ನೀಡುವ ಕೆಲಸ ಎನ್‌ಎಸ್‌ಯುಐ ಮಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಮಿಕರಿಗೆ (ಸ್ವಿಗ್ಗಿ, ಜೊಮ್ಯಾಟೊ, ಓಲಾ, ಉಬರ್ ಮುಂತಾದ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ) ಕ್ಷೇಮಾಭಿವೃದ್ಧಿ ನಿಗಮ ಸ್ಥಾಪಿಸಿ,200 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

andolanait

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

6 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

10 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

10 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

11 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago