BREAKING NEWS

ಮಿಝೋರಾಂ ಮೇಲೆ ರಾಜೇಶ್ ಪೈಲಟ್ ಬಾಂಬ್ ಎಸೆದಿದ್ದರು: ಮಾಳವೀಯ ಫೋಸ್ಟ್ ಗೆ ಸಚಿನ್ ಪೈಲಟ್ ತಿರುಗೇಟು

ನವದೆಹಲಿ : ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಎಸೆದಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಮಾಳವೀಯ ಅವರ ಹೇಳಿರುವ ವಿಷಯ ಹಾಗೂ ದಿನಾಂಕ ತಪ್ಪಾಗಿವೆ. ನನ್ನ ತಂದೆ ಆ ವರ್ಷದ ಅಕ್ಟೋಬರ್ ನಲ್ಲಿ ವಾಯುಪಡೆಗೆ ಸೇರಿದ್ದರು ಎಂದು ದಾಖಲೆ ಸಮೇತ ಪ್ರತಿಕ್ರಿಯಿಸಿದ್ದಾರೆ.

ಮಾರ್ಚ್ 5, 1966 ರಂದು ಮಿಝೋರಾಂನ ರಾಜಧಾನಿ ಐಜ್ವಾಲ್ ನಲ್ಲಿ ಬಾಂಬ್ ದಾಳಿ ಮಾಡಿದ ಭಾರತೀಯ ವಾಯುಪಡೆಯ ವಿಮಾನಗಳನ್ನು ರಾಜೇಶ್ ಪೈಲಟ್ ಹಾಗೂ ಸುರೇಶ್ ಕಲ್ಮಾಡಿ ಹಾರಿಸುತ್ತಿದ್ದರು ಎಂದು ಮಾಳವಿಯಾ X ನಲ್ಲಿನ ಪೋಸ್ಟ್ ನಲ್ಲಿ ಹೇಳಿದ್ದರು.

“ನಂತರ ಇಬ್ಬರೂ ಕಾಂಗ್ರೆಸ್ ಟಿಕೆಟ್ ಗಳಲ್ಲಿ ಸಂಸದರಾಗಿದರು. ಸರಕಾರದಲ್ಲಿ ಮಂತ್ರಿಗಳಾದರು, ಈಶಾನ್ಯದಲ್ಲಿ ತಮ್ಮದೇ ಜನರ ಮೇಲೆ ವಾಯುದಾಳಿ ನಡೆಸಿದವರಿಗೆ ಇಂದಿರಾ ಗಾಂಧಿ ಅವರು ರಾಜಕೀಯದಲ್ಲಿ ಸ್ಥಾನವನ್ನು ಪ್ರತಿಫಲವಾಗಿ ನೀಡಿ ಗೌರವ ನೀಡಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಹಿಂದಿಯಲ್ಲಿ ಮಾಳವೀಯ ಪೋಸ್ಟ್ ಮಾಡಿದ್ದರು.

ಬಿಜೆಪಿ ನಾಯಕ ಮಾಳವೀಯಗೆ ತಕ್ಕ ಎದಿರೇಟು ನೀಡಿದ ಪೈಲಟ್, “ಅಮಿತ್ ಮಾಳವೀಯ ಅವರೇ, ನೀವು ತಪ್ಪು ದಿನಾಂಕಗಳನ್ನು ಹೊಂದಿದ್ದೀರಿ, ತಪ್ಪು ಸತ್ಯಗಳನ್ನು ಹೊಂದಿದ್ದೀರಿ…ಹೌದು, ಭಾರತೀಯ ವಾಯುಪಡೆಯ ಪೈಲಟ್ ಆಗಿ, ನನ್ನ ದಿವಂಗತ ತಂದೆ ಬಾಂಬ್ ಗಳನ್ನು ಹಾಕಿದ್ದರು. ಆದರೆ 1971ರಲ್ಲಿ ಇಂಡೋ-ಪಾಕ್ ಯುದ್ದ ಸಂದರ್ಭದಲ್ಲಿ ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ. ಬಾಂಬ್ ಹಾಕಿದ್ದರು. ನೀವು ಹೇಳುವಂತೆ ಮಾರ್ಚ್ 5, 1966 ರಂದು ಮಿಝೋರಾಂನಲ್ಲಿ ಬಾಂಬ್ ಹಾಕಿದ್ದಲ್ಲ. ನನ್ನ ತಂದೆ 29 ಅಕ್ಟೋಬರ್ 1966 ರಂದು IAF ಗೆ ನೇಮಕಗೊಂಡರು! (ಪ್ರಮಾಣಪತ್ರ ಲಗತ್ತಿಸಲಾಗಿದೆ). ಜೈ ಹಿಂದ್ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು” ಎಂದು ಪೈಲಟ್ X ನಲ್ಲಿ ಹೇಳಿ್ದಾರೆ

ಪೈಲಟ್ ಹಂಚಿಕೊಂಡಿರುವ ಪ್ರಮಾಣಪತ್ರದ ಪ್ರಕಾರ ಅಕ್ಟೋಬರ್ 29, 1966ರಲ್ಲಿ ಭಾರತೀಯ ವಾಯುಪಡೆಗೆ ರಾಜೇಶ್ ಪೈಲಟ್ ಅವರನ್ನು ನಿಯೋಜಿಸಲಾಗಿತ್ತು.

andolanait

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

2 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

3 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

3 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

3 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

3 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

3 hours ago