BREAKING NEWS

ಮಿಝೋರಾಂ ಮೇಲೆ ರಾಜೇಶ್ ಪೈಲಟ್ ಬಾಂಬ್ ಎಸೆದಿದ್ದರು: ಮಾಳವೀಯ ಫೋಸ್ಟ್ ಗೆ ಸಚಿನ್ ಪೈಲಟ್ ತಿರುಗೇಟು

ನವದೆಹಲಿ : ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಎಸೆದಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಮಾಳವೀಯ ಅವರ ಹೇಳಿರುವ ವಿಷಯ ಹಾಗೂ ದಿನಾಂಕ ತಪ್ಪಾಗಿವೆ. ನನ್ನ ತಂದೆ ಆ ವರ್ಷದ ಅಕ್ಟೋಬರ್ ನಲ್ಲಿ ವಾಯುಪಡೆಗೆ ಸೇರಿದ್ದರು ಎಂದು ದಾಖಲೆ ಸಮೇತ ಪ್ರತಿಕ್ರಿಯಿಸಿದ್ದಾರೆ.

ಮಾರ್ಚ್ 5, 1966 ರಂದು ಮಿಝೋರಾಂನ ರಾಜಧಾನಿ ಐಜ್ವಾಲ್ ನಲ್ಲಿ ಬಾಂಬ್ ದಾಳಿ ಮಾಡಿದ ಭಾರತೀಯ ವಾಯುಪಡೆಯ ವಿಮಾನಗಳನ್ನು ರಾಜೇಶ್ ಪೈಲಟ್ ಹಾಗೂ ಸುರೇಶ್ ಕಲ್ಮಾಡಿ ಹಾರಿಸುತ್ತಿದ್ದರು ಎಂದು ಮಾಳವಿಯಾ X ನಲ್ಲಿನ ಪೋಸ್ಟ್ ನಲ್ಲಿ ಹೇಳಿದ್ದರು.

“ನಂತರ ಇಬ್ಬರೂ ಕಾಂಗ್ರೆಸ್ ಟಿಕೆಟ್ ಗಳಲ್ಲಿ ಸಂಸದರಾಗಿದರು. ಸರಕಾರದಲ್ಲಿ ಮಂತ್ರಿಗಳಾದರು, ಈಶಾನ್ಯದಲ್ಲಿ ತಮ್ಮದೇ ಜನರ ಮೇಲೆ ವಾಯುದಾಳಿ ನಡೆಸಿದವರಿಗೆ ಇಂದಿರಾ ಗಾಂಧಿ ಅವರು ರಾಜಕೀಯದಲ್ಲಿ ಸ್ಥಾನವನ್ನು ಪ್ರತಿಫಲವಾಗಿ ನೀಡಿ ಗೌರವ ನೀಡಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಹಿಂದಿಯಲ್ಲಿ ಮಾಳವೀಯ ಪೋಸ್ಟ್ ಮಾಡಿದ್ದರು.

ಬಿಜೆಪಿ ನಾಯಕ ಮಾಳವೀಯಗೆ ತಕ್ಕ ಎದಿರೇಟು ನೀಡಿದ ಪೈಲಟ್, “ಅಮಿತ್ ಮಾಳವೀಯ ಅವರೇ, ನೀವು ತಪ್ಪು ದಿನಾಂಕಗಳನ್ನು ಹೊಂದಿದ್ದೀರಿ, ತಪ್ಪು ಸತ್ಯಗಳನ್ನು ಹೊಂದಿದ್ದೀರಿ…ಹೌದು, ಭಾರತೀಯ ವಾಯುಪಡೆಯ ಪೈಲಟ್ ಆಗಿ, ನನ್ನ ದಿವಂಗತ ತಂದೆ ಬಾಂಬ್ ಗಳನ್ನು ಹಾಕಿದ್ದರು. ಆದರೆ 1971ರಲ್ಲಿ ಇಂಡೋ-ಪಾಕ್ ಯುದ್ದ ಸಂದರ್ಭದಲ್ಲಿ ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ. ಬಾಂಬ್ ಹಾಕಿದ್ದರು. ನೀವು ಹೇಳುವಂತೆ ಮಾರ್ಚ್ 5, 1966 ರಂದು ಮಿಝೋರಾಂನಲ್ಲಿ ಬಾಂಬ್ ಹಾಕಿದ್ದಲ್ಲ. ನನ್ನ ತಂದೆ 29 ಅಕ್ಟೋಬರ್ 1966 ರಂದು IAF ಗೆ ನೇಮಕಗೊಂಡರು! (ಪ್ರಮಾಣಪತ್ರ ಲಗತ್ತಿಸಲಾಗಿದೆ). ಜೈ ಹಿಂದ್ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು” ಎಂದು ಪೈಲಟ್ X ನಲ್ಲಿ ಹೇಳಿ್ದಾರೆ

ಪೈಲಟ್ ಹಂಚಿಕೊಂಡಿರುವ ಪ್ರಮಾಣಪತ್ರದ ಪ್ರಕಾರ ಅಕ್ಟೋಬರ್ 29, 1966ರಲ್ಲಿ ಭಾರತೀಯ ವಾಯುಪಡೆಗೆ ರಾಜೇಶ್ ಪೈಲಟ್ ಅವರನ್ನು ನಿಯೋಜಿಸಲಾಗಿತ್ತು.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

6 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago