BREAKING NEWS

ರಾಜ್ಯಸಭೆ: ಮುಂಗಾರು ಅಧಿವೇಶನದ ಉಳಿದ ಅವಧಿಗೆ ಎಎಪಿಯ ಸಂಜಯ್ ಸಿಂಗ್ ಅಮಾನತು

ನವದೆಹಲಿ : ‘ಅಶಿಸ್ತಿನ ವರ್ತನೆಗಾಗಿ’ ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. ಇದನ್ನು ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತು.

ನಿರ್ಣಯ ಮಂಡಿಸುವ ಮೊದಲು, ಸಭಾಪತಿ ಜಗದೀಪ್ ಧಂಖರ್ ಅವರು ಅಶಿಸ್ತಿನ ನಡವಳಿಕೆಗಾಗಿ ಸಂಜಯ್ ಸಿಂಗ್ ಅವರನ್ನು ಹೆಸರಿಸಿದರು ಮತ್ತು ಅವರಿಗೆ ಎಚ್ಚರಿಕೆ ನೀಡಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ, ವಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದ್ದರಿಂದ, ರಾಜ್ಯಸಭೆ ಅಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇದಕ್ಕೂ ಮುನ್ನ, ಮಧ್ಯಾಹ್ನ 12 ಗಂಟೆಗೆ ಸದನದ ಕಲಾಪ ಆರಂಭಗೊಂಡಾಗ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು.

ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ನಡೆಸುವುದಾಗಿ ಸಭಾಪತಿ ಘೋಷಿಸಿದರು. ಪ್ರಶ್ನೋತ್ತರ ಅವಧಿಯು ಗದ್ದಲದ ನಡುವೆಯೇ ಕೆಲವು ನಿಮಿಷಗಳ ಕಾಲ ಮುಂದುವರೆಯಿತು. ಈ ವೇಳೆ ಸದನದ ಬಾವಿಗಿಳಿದ ಸಂಜಯ್ ಸಿಂಗ್, ಸಭಾಪತಿಗಳೊಂದಿಗೆ ವಾಗ್ವಾದಕ್ಕಿಳಿದರು.

ಮೊದಲಿಗೆ ಅವರನ್ನು ಅವರ ಆಸನಕ್ಕೆ ಹಿಂತಿರುಗುವಂತೆ ಕೇಳಲಾಯಿತು. ಆದರೆ, ಅವರು ಅದನ್ನು ಕೇಳದಿದ್ದಾಗ, ನೀವು ಪದೇ ಪದೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದೀರಿ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದೀರಿ. ನೀವು ಇದೇ ರೀತಿ ಪದೇ ಪದೇ ವರ್ತಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಧಂಖರ್ ಎಚ್ಚರಿಕೆ ನೀಡಿದರು.

ಕೂಡಲೇ, ಗೋಯಲ್ ಅವರು ಎದ್ದುನಿಂತು ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸುವುದಾಗಿ ಹೇಳಿದರು.

‘ಈ ರೀತಿಯ ನಡವಳಿಕೆ ಮತ್ತು ಸದನವನ್ನು ಗೊಂದಲಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಸರ್ಕಾರವು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸಿದೆ ಎಂದ ಗೋಯಲ್, ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿಗಳನ್ನು ಒತ್ತಾಯಿಸಿದರು.

ಪೀಠವು ಗೋಯಲ್‌ಗೆ ಅಮಾನತು ನಿರ್ಣಯವನ್ನು ಮಂಡಿಸಲು ಅವಕಾಶ ನೀಡಿತು. ಸದನವು ಕೈ ಎತ್ತುವ ಮೂಲಕ ಮತ್ತು ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಿತು. ನಂತರ, ಸಭಾಪತಿ ಧಂಖರ್, ‘ಸಭಾಪತಿಯ ನಿರ್ದೇಶನಗಳನ್ನು ಪದೇ ಪದೆ ಉಲ್ಲಂಘಿಸಿದ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ’ ಎಂದು ಹೇಳಿದರು.

ಸದನವನ್ನು ಮುಂದೂಡಿದ ಕೂಡಲೇ, ಗೋಯಲ್ ಸಭಾಪತಿಯವರ ಕೊಠಡಿಗೆ ಹೋದರು ಮತ್ತು ಅನೇಕ ವಿರೋಧ ಪಕ್ಷಗಳ ನಾಯಕರು ಅವರನ್ನು ಹಿಂಬಾಲಿಸಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago