BREAKING NEWS

ರಾಜ್ಯಸಭೆ: ಮುಂಗಾರು ಅಧಿವೇಶನದ ಉಳಿದ ಅವಧಿಗೆ ಎಎಪಿಯ ಸಂಜಯ್ ಸಿಂಗ್ ಅಮಾನತು

ನವದೆಹಲಿ : ‘ಅಶಿಸ್ತಿನ ವರ್ತನೆಗಾಗಿ’ ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. ಇದನ್ನು ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತು.

ನಿರ್ಣಯ ಮಂಡಿಸುವ ಮೊದಲು, ಸಭಾಪತಿ ಜಗದೀಪ್ ಧಂಖರ್ ಅವರು ಅಶಿಸ್ತಿನ ನಡವಳಿಕೆಗಾಗಿ ಸಂಜಯ್ ಸಿಂಗ್ ಅವರನ್ನು ಹೆಸರಿಸಿದರು ಮತ್ತು ಅವರಿಗೆ ಎಚ್ಚರಿಕೆ ನೀಡಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ, ವಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದ್ದರಿಂದ, ರಾಜ್ಯಸಭೆ ಅಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇದಕ್ಕೂ ಮುನ್ನ, ಮಧ್ಯಾಹ್ನ 12 ಗಂಟೆಗೆ ಸದನದ ಕಲಾಪ ಆರಂಭಗೊಂಡಾಗ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು.

ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ನಡೆಸುವುದಾಗಿ ಸಭಾಪತಿ ಘೋಷಿಸಿದರು. ಪ್ರಶ್ನೋತ್ತರ ಅವಧಿಯು ಗದ್ದಲದ ನಡುವೆಯೇ ಕೆಲವು ನಿಮಿಷಗಳ ಕಾಲ ಮುಂದುವರೆಯಿತು. ಈ ವೇಳೆ ಸದನದ ಬಾವಿಗಿಳಿದ ಸಂಜಯ್ ಸಿಂಗ್, ಸಭಾಪತಿಗಳೊಂದಿಗೆ ವಾಗ್ವಾದಕ್ಕಿಳಿದರು.

ಮೊದಲಿಗೆ ಅವರನ್ನು ಅವರ ಆಸನಕ್ಕೆ ಹಿಂತಿರುಗುವಂತೆ ಕೇಳಲಾಯಿತು. ಆದರೆ, ಅವರು ಅದನ್ನು ಕೇಳದಿದ್ದಾಗ, ನೀವು ಪದೇ ಪದೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದೀರಿ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದೀರಿ. ನೀವು ಇದೇ ರೀತಿ ಪದೇ ಪದೇ ವರ್ತಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಧಂಖರ್ ಎಚ್ಚರಿಕೆ ನೀಡಿದರು.

ಕೂಡಲೇ, ಗೋಯಲ್ ಅವರು ಎದ್ದುನಿಂತು ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸುವುದಾಗಿ ಹೇಳಿದರು.

‘ಈ ರೀತಿಯ ನಡವಳಿಕೆ ಮತ್ತು ಸದನವನ್ನು ಗೊಂದಲಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಸರ್ಕಾರವು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸಿದೆ ಎಂದ ಗೋಯಲ್, ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿಗಳನ್ನು ಒತ್ತಾಯಿಸಿದರು.

ಪೀಠವು ಗೋಯಲ್‌ಗೆ ಅಮಾನತು ನಿರ್ಣಯವನ್ನು ಮಂಡಿಸಲು ಅವಕಾಶ ನೀಡಿತು. ಸದನವು ಕೈ ಎತ್ತುವ ಮೂಲಕ ಮತ್ತು ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಿತು. ನಂತರ, ಸಭಾಪತಿ ಧಂಖರ್, ‘ಸಭಾಪತಿಯ ನಿರ್ದೇಶನಗಳನ್ನು ಪದೇ ಪದೆ ಉಲ್ಲಂಘಿಸಿದ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ’ ಎಂದು ಹೇಳಿದರು.

ಸದನವನ್ನು ಮುಂದೂಡಿದ ಕೂಡಲೇ, ಗೋಯಲ್ ಸಭಾಪತಿಯವರ ಕೊಠಡಿಗೆ ಹೋದರು ಮತ್ತು ಅನೇಕ ವಿರೋಧ ಪಕ್ಷಗಳ ನಾಯಕರು ಅವರನ್ನು ಹಿಂಬಾಲಿಸಿದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

9 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

12 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

15 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

17 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

18 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

18 hours ago