ಬೆಂಗಳೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಮತದಾನ ಅಂತ್ಯಗೊಂಡಿದೆ. ಇಂದು ( ಫೆಬ್ರವರಿ 27 ) ವಿಧಾನಸೌಧದ 106ನೇ ಕೊಠಡಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು ಶೇ. 99.5ರಷ್ಟು ಮತದಾನ ನಡೆದಿದೆ.
ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾದರೆ, ಬಿಜೆಪಿಯ ಮತ್ತೋರ್ವ ಶಾಸಕ ಎಸ್. ಟಿ. ಸೋಮಶೇಖರ್ ಕಾಂಗ್ರೆಸ್ಗೆ ಅಡ್ಡ ಮತದಾನ ಮಾಡಿದ್ದಾರೆ.
ಕಾಂಗ್ರೆಸ್ನ 135 ಶಾಸಕರು, ಬಿಜೆಪಿಯ 65 ಶಾಸಕರು, ಮೂವರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್ನ 19 ಶಾಸಕರು ಮತದಾನ ಮಾಡಿದ್ದಾರೆ. ಇನ್ನು ಬಿಜೆಪಿಯ ಓರ್ವ ಶಾಸಕ ಕಾಂಗ್ರೆಸ್ಗೆ ಮತ ಹಾಕಿರುವುದು ಹಾಗೂ ಓರ್ವ ಶಾಸಕ ಗೈರಾಗಿರುವುದು ಪಕ್ಷಕ್ಕೆ ಹಿನ್ನಡೆಯನ್ನುಂಟುಮಾಡಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…