BREAKING NEWS

ರಾಜ್ಯಸಭಾ ಚುನಾವಣೆ ಮತದಾನ ಅಂತ್ಯ: ಶೇ. 99.5ರಷ್ಟು ಮತದಾನ

ಬೆಂಗಳೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಮತದಾನ ಅಂತ್ಯಗೊಂಡಿದೆ. ಇಂದು ( ಫೆಬ್ರವರಿ 27 ) ವಿಧಾನಸೌಧದ 106ನೇ ಕೊಠಡಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು ಶೇ. 99.5ರಷ್ಟು ಮತದಾನ ನಡೆದಿದೆ.

ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌ ಮತದಾನಕ್ಕೆ ಗೈರಾದರೆ, ಬಿಜೆಪಿಯ ಮತ್ತೋರ್ವ ಶಾಸಕ ಎಸ್.‌ ಟಿ. ಸೋಮಶೇಖರ್‌ ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿದ್ದಾರೆ.

ಕಾಂಗ್ರೆಸ್‌ನ 135 ಶಾಸಕರು, ಬಿಜೆಪಿಯ 65 ಶಾಸಕರು, ಮೂವರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್‌ನ 19 ಶಾಸಕರು ಮತದಾನ ಮಾಡಿದ್ದಾರೆ. ಇನ್ನು ಬಿಜೆಪಿಯ ಓರ್ವ ಶಾಸಕ ಕಾಂಗ್ರೆಸ್‌ಗೆ ಮತ ಹಾಕಿರುವುದು ಹಾಗೂ ಓರ್ವ ಶಾಸಕ ಗೈರಾಗಿರುವುದು ಪಕ್ಷಕ್ಕೆ ಹಿನ್ನಡೆಯನ್ನುಂಟುಮಾಡಿದೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

23 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago