BREAKING NEWS

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್‌ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

2006ರ ಜೂನ್ 11ರಂದು ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಖಿ ಸಾವಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಿಕಾ ಸಿಂಗ್ ಬಲವಂತವಾಗಿ ಚುಂಬಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿತ್ತು.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 (ದೌರ್ಜನ್ಯ) ಮತ್ತು 323 (ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಂಗ್ ಈ ವರ್ಷದ ಏಪ್ರಿಲ್‌ನಲ್ಲಿ, ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ನಂತರದ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ರಾಖಿ ಸಾವಂತ್ ಅವರು ಸಲ್ಲಿಸಿದ ಅಫಿಡವಿಟ್ ಅನ್ನು ಹೈಕೋರ್ಟ್ ಗುರುವಾರ ಪರಿಶೀಲಿಸಿತು. ಅದರಲ್ಲಿ ಅವರು ‘ನಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಂಡಿದ್ದೇವೆ ಮತ್ತು ನಮ್ಮ ಕಡೆಯಿಂದ ತಪ್ಪು ತಿಳುವಳಿಕೆ ಮತ್ತು ತಪ್ಪುಗ್ರಹಿಕೆಯಿಂದ ಇಡೀ ವಿವಾದ ಉದ್ಭವಿಸಿದೆ ಎಂಬುದನ್ನು ಅರಿತುಕೊಂಡಿರುವುದಾಗಿ’ ತಿಳಿಸಿದ್ದರು.

ನಂತರ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago