BREAKING NEWS

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್‌ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

2006ರ ಜೂನ್ 11ರಂದು ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಖಿ ಸಾವಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಿಕಾ ಸಿಂಗ್ ಬಲವಂತವಾಗಿ ಚುಂಬಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿತ್ತು.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 (ದೌರ್ಜನ್ಯ) ಮತ್ತು 323 (ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಂಗ್ ಈ ವರ್ಷದ ಏಪ್ರಿಲ್‌ನಲ್ಲಿ, ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ನಂತರದ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ರಾಖಿ ಸಾವಂತ್ ಅವರು ಸಲ್ಲಿಸಿದ ಅಫಿಡವಿಟ್ ಅನ್ನು ಹೈಕೋರ್ಟ್ ಗುರುವಾರ ಪರಿಶೀಲಿಸಿತು. ಅದರಲ್ಲಿ ಅವರು ‘ನಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಂಡಿದ್ದೇವೆ ಮತ್ತು ನಮ್ಮ ಕಡೆಯಿಂದ ತಪ್ಪು ತಿಳುವಳಿಕೆ ಮತ್ತು ತಪ್ಪುಗ್ರಹಿಕೆಯಿಂದ ಇಡೀ ವಿವಾದ ಉದ್ಭವಿಸಿದೆ ಎಂಬುದನ್ನು ಅರಿತುಕೊಂಡಿರುವುದಾಗಿ’ ತಿಳಿಸಿದ್ದರು.

ನಂತರ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago