BREAKING NEWS

ವೀರ ಸಾವರ್ಕರ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ರಾಮ್ ಚರಣ್ : ಶುರುವಾಯ್ತು ಚರ್ಚೆ

ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ ಆಗಿದೆ. ‘ದಿ ಕಾಶ್ಮಿರ್ ಫೈಲ್ಸ್’ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಹೌಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ನಿಖಿಲ್ ಸಿದ್ದಾರ್ಥ್ ಹೀರೋ ಆಗಿದ್ದು, ವೀರ ಸಾವರ್ಕರ್ ಕುರಿತು ಈ ಸಿನಿಮಾ ಇರಲಿದೆ.

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವೀರ ಸಾವರ್ಕರ್ ಕೊಡುಗೆಯೂ ಇದೆ. ಅವರ ಹೋರಾಟಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲಲಿದೆ. ನಿಖಿಲ್ ಸಿದ್ದಾರ್ಥ್ ಜೊತೆ ಅನುಪಮ್ ಖೇರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಅವರು 1906-1910ರವರೆಗೆ ಲಂಡನ್​ನಲ್ಲಿರುವ ಇಂಡಿಯಾ ಹೌಸ್​ನಲ್ಲಿ ವಾಸವಾಗಿದ್ದರು. ಅಂದಿನ ಸಮಯದಲ್ಲಿ ಈ ಜಾಗ ಬಹಳ ಮಹತ್ವ ಪಡೆದುಕೊಂಡಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು ಈ ಜಾಗದಲ್ಲಿ ತಂತ್ರಗಳನ್ನು ರೂಪಿಸಲಾಗುತ್ತಿತ್ತು. ಈ ಕಾರಣಕ್ಕೆ ಸಿನಿಮಾಗೆ ‘ದಿ ಇಂಡಿಯಾ ಹೌಸ್​’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈಗ ರಾಮ್ ಚರಣ್ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಬಗ್ಗೆ ಒಂದಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ.

ಅಭಿಷೇಕ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಬಿಜೆಪಿಗರ ಬೆಂಬಲ ಇತ್ತು ಅನ್ನೋದು ಒಂದಷ್ಟು ಮಂದಿಯ ಆರೋಪ. ಈಗ ‘ದಿ ಇಂಡಿಯಾ ಹೌಸ್’ ಚಿತ್ರಕ್ಕೂ ಇದೇ ರೀತಿಯ ಆರೋಪ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಿನಿಮಾಗೆ ಮತ್ತಷ್ಟು ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ.
ಅಭಿಷೇಕ್ ಅಗರ್​ವಾಲ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಆದರೆ, ಇದಕ್ಕೆಲ್ಲ ಅಭಿಷೇಕ್ ತಲೆಕೆಡಿಸಿಕೊಂಡಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸದಾ ವಿವಾದದಿಂದ ದೂರ ಉಳಿಯ ಬಯಸುವ ರಾಮ್ ಚರಣ್ ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
https://twitter.com/AlwaysRamCharan/status/1662695713049022464?s=20

lokesh

Recent Posts

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

3 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

1 hour ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

1 hour ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

3 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

3 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago