BREAKING NEWS

ವೀರ ಸಾವರ್ಕರ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ರಾಮ್ ಚರಣ್ : ಶುರುವಾಯ್ತು ಚರ್ಚೆ

ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ ಆಗಿದೆ. ‘ದಿ ಕಾಶ್ಮಿರ್ ಫೈಲ್ಸ್’ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಹೌಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ನಿಖಿಲ್ ಸಿದ್ದಾರ್ಥ್ ಹೀರೋ ಆಗಿದ್ದು, ವೀರ ಸಾವರ್ಕರ್ ಕುರಿತು ಈ ಸಿನಿಮಾ ಇರಲಿದೆ.

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವೀರ ಸಾವರ್ಕರ್ ಕೊಡುಗೆಯೂ ಇದೆ. ಅವರ ಹೋರಾಟಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲಲಿದೆ. ನಿಖಿಲ್ ಸಿದ್ದಾರ್ಥ್ ಜೊತೆ ಅನುಪಮ್ ಖೇರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಅವರು 1906-1910ರವರೆಗೆ ಲಂಡನ್​ನಲ್ಲಿರುವ ಇಂಡಿಯಾ ಹೌಸ್​ನಲ್ಲಿ ವಾಸವಾಗಿದ್ದರು. ಅಂದಿನ ಸಮಯದಲ್ಲಿ ಈ ಜಾಗ ಬಹಳ ಮಹತ್ವ ಪಡೆದುಕೊಂಡಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು ಈ ಜಾಗದಲ್ಲಿ ತಂತ್ರಗಳನ್ನು ರೂಪಿಸಲಾಗುತ್ತಿತ್ತು. ಈ ಕಾರಣಕ್ಕೆ ಸಿನಿಮಾಗೆ ‘ದಿ ಇಂಡಿಯಾ ಹೌಸ್​’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈಗ ರಾಮ್ ಚರಣ್ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಬಗ್ಗೆ ಒಂದಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ.

ಅಭಿಷೇಕ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಬಿಜೆಪಿಗರ ಬೆಂಬಲ ಇತ್ತು ಅನ್ನೋದು ಒಂದಷ್ಟು ಮಂದಿಯ ಆರೋಪ. ಈಗ ‘ದಿ ಇಂಡಿಯಾ ಹೌಸ್’ ಚಿತ್ರಕ್ಕೂ ಇದೇ ರೀತಿಯ ಆರೋಪ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಿನಿಮಾಗೆ ಮತ್ತಷ್ಟು ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ.
ಅಭಿಷೇಕ್ ಅಗರ್​ವಾಲ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಆದರೆ, ಇದಕ್ಕೆಲ್ಲ ಅಭಿಷೇಕ್ ತಲೆಕೆಡಿಸಿಕೊಂಡಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸದಾ ವಿವಾದದಿಂದ ದೂರ ಉಳಿಯ ಬಯಸುವ ರಾಮ್ ಚರಣ್ ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
https://twitter.com/AlwaysRamCharan/status/1662695713049022464?s=20

lokesh

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

5 mins ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

7 mins ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

9 mins ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

11 mins ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

15 mins ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

21 mins ago