ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ ಆಗಿದೆ. ‘ದಿ ಕಾಶ್ಮಿರ್ ಫೈಲ್ಸ್’ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಹೌಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ನಿಖಿಲ್ ಸಿದ್ದಾರ್ಥ್ ಹೀರೋ ಆಗಿದ್ದು, ವೀರ ಸಾವರ್ಕರ್ ಕುರಿತು ಈ ಸಿನಿಮಾ ಇರಲಿದೆ.
ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವೀರ ಸಾವರ್ಕರ್ ಕೊಡುಗೆಯೂ ಇದೆ. ಅವರ ಹೋರಾಟಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲಲಿದೆ. ನಿಖಿಲ್ ಸಿದ್ದಾರ್ಥ್ ಜೊತೆ ಅನುಪಮ್ ಖೇರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಾವರ್ಕರ್ ಅವರು 1906-1910ರವರೆಗೆ ಲಂಡನ್ನಲ್ಲಿರುವ ಇಂಡಿಯಾ ಹೌಸ್ನಲ್ಲಿ ವಾಸವಾಗಿದ್ದರು. ಅಂದಿನ ಸಮಯದಲ್ಲಿ ಈ ಜಾಗ ಬಹಳ ಮಹತ್ವ ಪಡೆದುಕೊಂಡಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು ಈ ಜಾಗದಲ್ಲಿ ತಂತ್ರಗಳನ್ನು ರೂಪಿಸಲಾಗುತ್ತಿತ್ತು. ಈ ಕಾರಣಕ್ಕೆ ಸಿನಿಮಾಗೆ ‘ದಿ ಇಂಡಿಯಾ ಹೌಸ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈಗ ರಾಮ್ ಚರಣ್ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಬಗ್ಗೆ ಒಂದಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ.
ಅಭಿಷೇಕ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಬಿಜೆಪಿಗರ ಬೆಂಬಲ ಇತ್ತು ಅನ್ನೋದು ಒಂದಷ್ಟು ಮಂದಿಯ ಆರೋಪ. ಈಗ ‘ದಿ ಇಂಡಿಯಾ ಹೌಸ್’ ಚಿತ್ರಕ್ಕೂ ಇದೇ ರೀತಿಯ ಆರೋಪ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಿನಿಮಾಗೆ ಮತ್ತಷ್ಟು ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ.
ಅಭಿಷೇಕ್ ಅಗರ್ವಾಲ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಆದರೆ, ಇದಕ್ಕೆಲ್ಲ ಅಭಿಷೇಕ್ ತಲೆಕೆಡಿಸಿಕೊಂಡಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸದಾ ವಿವಾದದಿಂದ ದೂರ ಉಳಿಯ ಬಯಸುವ ರಾಮ್ ಚರಣ್ ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
https://twitter.com/AlwaysRamCharan/status/1662695713049022464?s=20
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…