ಬೆಂಗಳೂರು: ದೇವಾಸ್ ಮಲ್ಟಿಮೀಡಿಯಾ ಪ್ರೈ.ಲಿ.ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರನ್ ವಿಶ್ವನಾಥನ್ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ.
ಸೆಕ್ಷನ್ 12(2)ರ ಅಡಿ ರಾಮಚಂದ್ರನ್ ಆಸ್ತಿ ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಜೂ.26ಕ್ಕೆ ನ್ಯಾಯಾಲಯ ಮುಂದೂಡಿದೆ. ಜಾರಿ ನಿರ್ದೇಶಾಲಯ (ಇಡಿ) ಪರವಾಗಿ ಎಸ್ಪಿಪಿ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.
ಏನಿದು ಪ್ರಕರಣ ?: 2004ರಲ್ಲಿ ರಾಮ ಚಂದ್ರನ್ ವಿಶ್ವನಾಥನ್ ಬೆಂಗಳೂರಿನಲ್ಲಿ ಉಪಗ್ರಹ ಆಧಾರಿತ ದೇವಾಸ್ ಮಲ್ಟಿ ಮೀಡಿಯಾ ಸೇವೆಗಳ ಕಂಪನಿ ಪ್ರಾರಂಭಿಸಿದ್ದರು. ಈ ಕಂಪನಿ ಭಾರತೀಯ ಮೊಬೈಲ್ ಬಳಕೆದಾರರಿಗೆ ಎಸ್-ಬ್ಯಾಂಡ್ ಟ್ರಾನ್ಸ್ಟಾಂಡರ್ಸ್ ಸಂವಹನ ಉಪಗ್ರಹದ ಮೂಲಕ ಮಲ್ಟಿಮೀಡಿಯಾ ಸೇವೆ ನೀಡಲು ಮುಂದಾಗಿತ್ತು. ಆಂತರಿಕ್ಷ್ ಕಾರ್ಪೊರೇಶನ್ ಜೊತೆ ಉಪಗ್ರಹ ನಿರ್ಮಿಸಬೇಕಾದ ಒಪ್ಪಂದ ಮಾಡಲಾಗಿತ್ತು. ದೇವಾಸ್ ಹಾಗೂ ಆಂತರಿಕ್ಸ್ ಒಡಂಬಡಿಕೆಯಲ್ಲಿ ಭ್ರಷ್ಟಾಚಾರ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಆಗಿರುವ ರಾಮಚಂದ್ರನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿತ್ತು.
ಆದರೆ, ರಾಮಚಂದ್ರನ್ ವಿಶ್ವನಾಥನ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಾಮಚಂದ್ರನ್ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ರಾಮಚಂದ್ರನ್ ವಿಶ್ವನಾಥನ್ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಅಮೆರಿಕದ ನಿವಾಸಿಯಾಗಿರುವ ರಾಮಚಂದ್ರನ್ ಭಾರತ ಮೂಲದವರಾಗಿದ್ದು, ಈಗಾಗಲೇ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…