BREAKING NEWS

ರಾಮ ಜನ್ಮಭೂಮಿ ಅವೈಜ್ಞಾನಿಕ, ರಾಮ-ಕೃಷ್ಣ ಎಲ್ಲಾ ಬರೀ ಕಾಲ್ಪನಿಕ ಅಷ್ಟೇ: ನಟ ಚೇತನ್ ಅಹಿಂಸಾ

ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ.

ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್‌ ಜೊತೆ ಮಾತನಾಡಿರುವ ಚೇತನ್ ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎಂದಿದ್ದಾರೆ. ‘ಸಾರ್ವಕರ್ ಹೇಳುವಂತೆ ರಾಮ, ರಾವಣನನ್ನು ಸಾಯಿಸಿ ಅಯೋಧ್ಯೆಗೆ ಬಂದು ದೇಶ ಶುರುವಾಯಿತು ಎನ್ನುವುದನ್ನು ಒಪ್ಪುವುದಿಲ್ಲ. ಅದು ಸುಳ್ಳು. ಅದು ಅವರ ಅಭಿಪ್ರಾಯ ಇರಬಹುದು. ನಮ್ಮ ಪ್ರಕಾರ ಸುಳ್ಳು.

ಅದೇ ರೀತಿ 1992 ಹಿಂದುತ್ವಕ್ಕೆ ಬಹಳ ದೊಡ್ಡ ಘಟನೆ. ಆಗ ರಾಮಜನ್ಮಭೂಮಿ ಆಗುತ್ತದೆ. ರಾಮ ಜನ್ಮಭೂಮಿ ಆದಾಗ ಬಾಬ್ರಿ ಮಸೀದಿ ಒಡೆದು ಹಾಕುತ್ತಾರೆ. ರಾಮಜನ್ಮಭೂಮಿ ಎನ್ನುವ ಕಾನ್ಸೆಪ್ಟ್ ಅವೈಜ್ಞಾನಿಕ. ರಾಮ ಅನ್ನೋದು ಕಾಲ್ಪನಿಕ ವ್ಯಕ್ತಿ. ನಂಬಿಕೆ ಇರಬಹುದು. ಸಾರ್ವಕರ್ ರಾಮ ಬೇರೆ, ಗಾಂಧೀ ರಾಮ ಬೇರೆ, ರಾಮಾಯಣದ ರಾಮ ಬೇರೆ’ ಎಂದು ಹೇಳಿದರು.

ಇತ್ತೀಚೆಗಷ್ಟೆ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾರಣ ನಟ ಚೇತನ್ ಅಹಿಂಸಾರನ್ನು ಬಂಧಿಸಲಾಗಿತ್ತು.  “ಹಿಂದುತ್ವವನ್ನು ಸುಳ್ಳಿನ ಅಧಾರದ ಮೇಲೆ ಕಟ್ಟಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಜೈಲಿನಿಂದ ಬಂದ ಬಳಿಕವೂ ಚೇತನ್ ಹೆಚ್ಚಿನ ಹೋರಾಟ ಮಾಡುವುದಾಗಿ ಹೇಳಿದ್ದರು.

ಇದಾದ ಬಳಿಕ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಎಲ್ಲಾ ಘಟನೆಗಳ ಬಳಿಕವೂ ಚೇತನ್ ಇದೀಗ ರಾಮ ಬಗ್ಗೆ ನೀಡಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago