ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ.
ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್ ಜೊತೆ ಮಾತನಾಡಿರುವ ಚೇತನ್ ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎಂದಿದ್ದಾರೆ. ‘ಸಾರ್ವಕರ್ ಹೇಳುವಂತೆ ರಾಮ, ರಾವಣನನ್ನು ಸಾಯಿಸಿ ಅಯೋಧ್ಯೆಗೆ ಬಂದು ದೇಶ ಶುರುವಾಯಿತು ಎನ್ನುವುದನ್ನು ಒಪ್ಪುವುದಿಲ್ಲ. ಅದು ಸುಳ್ಳು. ಅದು ಅವರ ಅಭಿಪ್ರಾಯ ಇರಬಹುದು. ನಮ್ಮ ಪ್ರಕಾರ ಸುಳ್ಳು.
ಅದೇ ರೀತಿ 1992 ಹಿಂದುತ್ವಕ್ಕೆ ಬಹಳ ದೊಡ್ಡ ಘಟನೆ. ಆಗ ರಾಮಜನ್ಮಭೂಮಿ ಆಗುತ್ತದೆ. ರಾಮ ಜನ್ಮಭೂಮಿ ಆದಾಗ ಬಾಬ್ರಿ ಮಸೀದಿ ಒಡೆದು ಹಾಕುತ್ತಾರೆ. ರಾಮಜನ್ಮಭೂಮಿ ಎನ್ನುವ ಕಾನ್ಸೆಪ್ಟ್ ಅವೈಜ್ಞಾನಿಕ. ರಾಮ ಅನ್ನೋದು ಕಾಲ್ಪನಿಕ ವ್ಯಕ್ತಿ. ನಂಬಿಕೆ ಇರಬಹುದು. ಸಾರ್ವಕರ್ ರಾಮ ಬೇರೆ, ಗಾಂಧೀ ರಾಮ ಬೇರೆ, ರಾಮಾಯಣದ ರಾಮ ಬೇರೆ’ ಎಂದು ಹೇಳಿದರು.
ಇತ್ತೀಚೆಗಷ್ಟೆ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾರಣ ನಟ ಚೇತನ್ ಅಹಿಂಸಾರನ್ನು ಬಂಧಿಸಲಾಗಿತ್ತು. “ಹಿಂದುತ್ವವನ್ನು ಸುಳ್ಳಿನ ಅಧಾರದ ಮೇಲೆ ಕಟ್ಟಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಜೈಲಿನಿಂದ ಬಂದ ಬಳಿಕವೂ ಚೇತನ್ ಹೆಚ್ಚಿನ ಹೋರಾಟ ಮಾಡುವುದಾಗಿ ಹೇಳಿದ್ದರು.
ಇದಾದ ಬಳಿಕ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಎಲ್ಲಾ ಘಟನೆಗಳ ಬಳಿಕವೂ ಚೇತನ್ ಇದೀಗ ರಾಮ ಬಗ್ಗೆ ನೀಡಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…