BREAKING NEWS

ರಾಮ ಜನ್ಮಭೂಮಿ ಅವೈಜ್ಞಾನಿಕ, ರಾಮ-ಕೃಷ್ಣ ಎಲ್ಲಾ ಬರೀ ಕಾಲ್ಪನಿಕ ಅಷ್ಟೇ: ನಟ ಚೇತನ್ ಅಹಿಂಸಾ

ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ.

ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್‌ ಜೊತೆ ಮಾತನಾಡಿರುವ ಚೇತನ್ ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎಂದಿದ್ದಾರೆ. ‘ಸಾರ್ವಕರ್ ಹೇಳುವಂತೆ ರಾಮ, ರಾವಣನನ್ನು ಸಾಯಿಸಿ ಅಯೋಧ್ಯೆಗೆ ಬಂದು ದೇಶ ಶುರುವಾಯಿತು ಎನ್ನುವುದನ್ನು ಒಪ್ಪುವುದಿಲ್ಲ. ಅದು ಸುಳ್ಳು. ಅದು ಅವರ ಅಭಿಪ್ರಾಯ ಇರಬಹುದು. ನಮ್ಮ ಪ್ರಕಾರ ಸುಳ್ಳು.

ಅದೇ ರೀತಿ 1992 ಹಿಂದುತ್ವಕ್ಕೆ ಬಹಳ ದೊಡ್ಡ ಘಟನೆ. ಆಗ ರಾಮಜನ್ಮಭೂಮಿ ಆಗುತ್ತದೆ. ರಾಮ ಜನ್ಮಭೂಮಿ ಆದಾಗ ಬಾಬ್ರಿ ಮಸೀದಿ ಒಡೆದು ಹಾಕುತ್ತಾರೆ. ರಾಮಜನ್ಮಭೂಮಿ ಎನ್ನುವ ಕಾನ್ಸೆಪ್ಟ್ ಅವೈಜ್ಞಾನಿಕ. ರಾಮ ಅನ್ನೋದು ಕಾಲ್ಪನಿಕ ವ್ಯಕ್ತಿ. ನಂಬಿಕೆ ಇರಬಹುದು. ಸಾರ್ವಕರ್ ರಾಮ ಬೇರೆ, ಗಾಂಧೀ ರಾಮ ಬೇರೆ, ರಾಮಾಯಣದ ರಾಮ ಬೇರೆ’ ಎಂದು ಹೇಳಿದರು.

ಇತ್ತೀಚೆಗಷ್ಟೆ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾರಣ ನಟ ಚೇತನ್ ಅಹಿಂಸಾರನ್ನು ಬಂಧಿಸಲಾಗಿತ್ತು.  “ಹಿಂದುತ್ವವನ್ನು ಸುಳ್ಳಿನ ಅಧಾರದ ಮೇಲೆ ಕಟ್ಟಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಜೈಲಿನಿಂದ ಬಂದ ಬಳಿಕವೂ ಚೇತನ್ ಹೆಚ್ಚಿನ ಹೋರಾಟ ಮಾಡುವುದಾಗಿ ಹೇಳಿದ್ದರು.

ಇದಾದ ಬಳಿಕ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಎಲ್ಲಾ ಘಟನೆಗಳ ಬಳಿಕವೂ ಚೇತನ್ ಇದೀಗ ರಾಮ ಬಗ್ಗೆ ನೀಡಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

andolanait

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

2 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

2 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

2 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

2 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

2 hours ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago