BREAKING NEWS

ರಾಮ ಜನ್ಮಭೂಮಿ ಅವೈಜ್ಞಾನಿಕ, ರಾಮ-ಕೃಷ್ಣ ಎಲ್ಲಾ ಬರೀ ಕಾಲ್ಪನಿಕ ಅಷ್ಟೇ: ನಟ ಚೇತನ್ ಅಹಿಂಸಾ

ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ.

ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್‌ ಜೊತೆ ಮಾತನಾಡಿರುವ ಚೇತನ್ ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎಂದಿದ್ದಾರೆ. ‘ಸಾರ್ವಕರ್ ಹೇಳುವಂತೆ ರಾಮ, ರಾವಣನನ್ನು ಸಾಯಿಸಿ ಅಯೋಧ್ಯೆಗೆ ಬಂದು ದೇಶ ಶುರುವಾಯಿತು ಎನ್ನುವುದನ್ನು ಒಪ್ಪುವುದಿಲ್ಲ. ಅದು ಸುಳ್ಳು. ಅದು ಅವರ ಅಭಿಪ್ರಾಯ ಇರಬಹುದು. ನಮ್ಮ ಪ್ರಕಾರ ಸುಳ್ಳು.

ಅದೇ ರೀತಿ 1992 ಹಿಂದುತ್ವಕ್ಕೆ ಬಹಳ ದೊಡ್ಡ ಘಟನೆ. ಆಗ ರಾಮಜನ್ಮಭೂಮಿ ಆಗುತ್ತದೆ. ರಾಮ ಜನ್ಮಭೂಮಿ ಆದಾಗ ಬಾಬ್ರಿ ಮಸೀದಿ ಒಡೆದು ಹಾಕುತ್ತಾರೆ. ರಾಮಜನ್ಮಭೂಮಿ ಎನ್ನುವ ಕಾನ್ಸೆಪ್ಟ್ ಅವೈಜ್ಞಾನಿಕ. ರಾಮ ಅನ್ನೋದು ಕಾಲ್ಪನಿಕ ವ್ಯಕ್ತಿ. ನಂಬಿಕೆ ಇರಬಹುದು. ಸಾರ್ವಕರ್ ರಾಮ ಬೇರೆ, ಗಾಂಧೀ ರಾಮ ಬೇರೆ, ರಾಮಾಯಣದ ರಾಮ ಬೇರೆ’ ಎಂದು ಹೇಳಿದರು.

ಇತ್ತೀಚೆಗಷ್ಟೆ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾರಣ ನಟ ಚೇತನ್ ಅಹಿಂಸಾರನ್ನು ಬಂಧಿಸಲಾಗಿತ್ತು.  “ಹಿಂದುತ್ವವನ್ನು ಸುಳ್ಳಿನ ಅಧಾರದ ಮೇಲೆ ಕಟ್ಟಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಜೈಲಿನಿಂದ ಬಂದ ಬಳಿಕವೂ ಚೇತನ್ ಹೆಚ್ಚಿನ ಹೋರಾಟ ಮಾಡುವುದಾಗಿ ಹೇಳಿದ್ದರು.

ಇದಾದ ಬಳಿಕ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಎಲ್ಲಾ ಘಟನೆಗಳ ಬಳಿಕವೂ ಚೇತನ್ ಇದೀಗ ರಾಮ ಬಗ್ಗೆ ನೀಡಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

1 min ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

33 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

44 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago