ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿ ನಡೆದಿರುವುದು ವರದಿಯಾಗಿದೆ.
ಶನಿವಾರ ರಾತ್ರಿಯಿಂದಲೇ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು ನೋಡಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ, ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಘರ್ಷಣೆ ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳು ಬ್ಯಾಟ್ ಹಿಡಿದು ಬಂದು, ಇಟ್ಟಿಗೆ ಎಸೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಎರಡು ಅಂಗಡಿ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದಾರೆ.ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು, ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಹಾರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಶಾಸ್ತ್ರಿನಗರ ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…